Advertisement

ಮರಳಿ ಶಾಲೆ ಸೇರಿದ ಮಕ್ಕಳು

12:10 PM Nov 23, 2019 | Suhan S |

ಧಾರವಾಡ: ವಿದ್ಯಾಗಿರಿಗೆ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಭೇಟಿ ನೀಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಮಾಡಿ ಶಾಲೆಗೆ ಮರಳಿಸಿ ಸೇರಿಸಿದ್ದಾರೆ.

Advertisement

3 ತಿಂಗಳ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿದ್ದರು. ಆದರೆ ಈ ಮಕ್ಕಳು ಶಾಲೆಗೆ ಗೈರು ಹಾಜರಾದ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶುಕ್ರವಾರ ಪುನಃ ಅವರ ವಾಸ ಸ್ಥಳಕ್ಕೆ ಹೋಗಿ ಪಾಲಕರ ಮನವೊಲಿಸಿ ಶಾಲೆಗೆ ಸೇರಿಸುವಲ್ಲಿ ಸಫಲರಾಗಿದ್ದಾರೆ.

ಯಾವ ಯಾವ ಶಾಲೆಗಳಲ್ಲಿ ಇಂತಹ ಮಕ್ಕಳು ದಾಖಲಾಗಿದ್ದರೋ ಅವರ ಹಾಜರಾತಿ ಖಾತ್ರಿ ಪಡಿಸಲು ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಎಲ್ಲ ಶೈಕ್ಷಣಿಕ ಮೇಲ್ವಿಚಾರಕರಿಗೆ ಇಟ್ಟಂಗಿ ಭಟ್ಟಿ, ಗ್ಯಾರೇಜ್‌, ಇತರೆ ಸ್ಥಳಗಳಿಗೆ ಭೇಟಿ ನೀಡಲು ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next