Advertisement
ಗ್ರಾಮ ಪಂಚಾಯಿತಿ ಕೇಂದ್ರವಾಗಿರುವ ಗಂಜಿಗುಂಟೆ ಕೇಂದ್ರ ತಾಲೂಕಿನ ಗಡಿಭಾಗದಲ್ಲಿದ್ದು, ತೀರಾ ಹಿಂದುಳಿದ ಕೇಂದ್ರವಾಗಿದೆ. ಮುಖ್ಯವಾಗಿ ಸರ್ಕಾರದ ನಿರ್ಲಕ್ಷ್ಯದಿಂದ ನಿರೀಕ್ಷಿತ ಅಭಿವೃದ್ಧಿ ಹೊಂದಿಲ್ಲವೆಂಬ ದೂರು ಸರ್ವೇ ಸಾಮನ್ಯವಾಗಿದೆ. ಈ ಮಧ್ಯೆ ಗ್ರಾಮದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಸೌಲಭ್ಯಗಳಿಂದ ವಂಚಿತಗೊಂಡಿದ್ದು, ವಿದ್ಯಾರ್ಥಿಗಳು ಆತಂಕದಲ್ಲಿ ಜ್ಞಾನರ್ಜನೆ ಮಾಡಿಕೊಳ್ಳಬೇಕಾದ ದುಸ್ಥಿತಿ ಬಂದೊದಗಿದೆ.
Related Articles
ನೆಲವೇ ಡೆಸ್ಕ್: ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ. ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಥಮ ಆದ್ಯತೆ ನೀಡಿದ್ದೇವೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಅವರ ಭವಿಷ್ಯ ಉಜ್ವಲಗೊಳಿಸಬೇಕೆಂದು ಅರಿವು ಮತ್ತು ಜಾಗೃತಿ ಮೂಡಿಸುತ್ತಾರೆ. ಆದರೆ ಗಂಜಿಗುಂಟೆ ಗ್ರಾಮದ ಉರ್ದು ಶಾಲೆಯಲ್ಲಿ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ವ್ಯಾಸಂಗ ಮಾಡುವಂತಾಗಿದೆ.
Advertisement
ಗೋದಾಮಾಗಿರುವ ಶಾಲಾವರಣ: ಸರ್ಕಾರಿ ಶಾಲೆಯಲ್ಲಿ ಜ್ಞಾನರ್ಜನೆಗೆ ಪೂರಕವಾಗಿ ಪರಿಸರ ಇರಬೇಕು. ಆದರೆ ಶಾಲೆಯ ಆವರಣದಲ್ಲಿ ಕಲ್ಲುಗಳು ಮತ್ತು ಕುಡಿಯುವ ನೀರು ಪೂರೈಕೆ ಮಾಡುವ ಮಿನಿ ಟ್ಯಾಂಕ್ ದಾಸ್ತಾನು ಮಾಡಲಾಗಿದೆ. ಇದರಿಂದ ಶಾಲೆಯ ಪರಿಸರ ಹಾಳಾಗಿದ್ದು, ವಿಷಜಂತುಗಳಿಗೆ ಆಶ್ರಯತಾಣವಾಗಿದೆ.
ಬಿಇಒ ಪ್ರತಿಕ್ರಿಯೆ: ಗಂಜಿಗುಂಟೆಯ ಸರ್ಕಾರಿ ಶಾಲೆಯ ಕಾಂಪೌಂಡ್ ದುಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಶಿಡ್ಲಘಟ್ಟ ತಾಲೂಕು ಬಿಇಒ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸುತ್ತೇವೆ. ಇನ್ನುಳಿದ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ತಿಳಿಸಿದ್ದಾರೆ.
* ಎಂ.ಎ.ತಮೀಮ್ ಪಾಷ