Advertisement

ಚಿಂಚೋಳಿ BJP  ಶಾಸಕರ ವಾಹನಗಳ ಮೇಲೆ ಕಲ್ಲು ತೂರಾಟ

11:11 PM Apr 15, 2023 | Team Udayavani |

ಕಲಬುರಗಿ: ಪ್ರಚಾರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಚಿಂಚೋಳಿ ಬಿಜೆಪಿ ಶಾಸಕ ಡಾ. ಅವಿನಾಶ ಜಾಧವ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

Advertisement

ಶಾಸಕರು ಪ್ರಚಾರಕ್ಕೆ ತೆರಳುತ್ತಿರುವಾಗ ಶಾಸಕ ಅವಿನಾಶ ಜಾಧವ್ ಹಾಗೂ ಅವರ ಬೆಂಬಲಿಗ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ತಾಲೂಕಿನ ಚಂದಾಪುರ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳುವಾಗ ಗ್ರಾಮದ ಪರಿಶಿಷ್ಟ ಬಡಾವಣೆಯಿಂದ ತೆರಳುವಾಗ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್ ನವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next