Advertisement

ಬೀಜ-ರಸಗೊಬ್ಬರ ಅಗತ್ಯ ದಾಸ್ತಾನು: ರಾಠೋಡ

05:54 PM Jun 04, 2020 | Naveen |

ಚಿಂಚೋಳಿ: ತಾಲೂಕಿನಲ್ಲಿ ಸೋಮವಾರ ರಾತ್ರಿ ಅಲ್ಪ ಪ್ರಮಾಣದಲ್ಲಿ ಮಳೆ ಆಗಿರುವುದರಿಂದ ಬೀಜ ಬಿತ್ತನೆಗೆ ಬರುವುದಿಲ್ಲ. ಇದೀಗ ಮುಂಗಾರು ಮಳೆ ಪ್ರಾರಂಭ ಆಗುತ್ತಿದೆ ಎಂದು ತಾಲೂಕ ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೋಡ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್‌ ತಿಂಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸ್ಪಷ್ಟನೆ ನೀಡಿದೆ. ರೈತರು ಮುಂಗಾರು ಹಂಗಾಮಿನಲ್ಲಿ ತೊಗರಿ, ಉದ್ದು, ಹೆಸರು, ಸೋಯಾಬಿನ್‌, ಹೈಬ್ರಿಡ್‌ ಜೋಳ ಬಿತ್ತನೆ ಮಾಡಲು ಜಮೀನು ಉಳುಮೆ ಮಾಡಿ ಸಿದ್ಧತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ಆದರೆ ರೈತರು ಬಿತ್ತನೆಯ ಕೃಷಿ ಚಟುವಟಿಕೆಗಳು ಪ್ರಾರಂಭ ಆಗಲಿವೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳು ಮತ್ತು ರಸಗೊಬ್ಬರ ಸಂಗ್ರಹಣೆ ಮಾಡಲಾಗಿದ್ದು, ರೈತರು ಬೀಜಗಳನ್ನು ಖರೀದಿಸುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next