Advertisement

ಚಿನ್ನಸ್ವಾಮಿ ಸ್ಫೋಟ:ಆರೋಪಿಗೆ ಜಾಮೀನು

02:21 PM Oct 18, 2017 | |

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಪೈಶ್‌ ಮೊಹಮದ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿ ಪೈಶ್‌ ಮೊಹಮದ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ, ದೇಶ ಬಿಟ್ಟು ತೆರಳಬಾರದು, ಸಾಕ್ಷ್ಯಾನಾಶಕ್ಕೆ ಯತ್ನಿಸಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.

Advertisement

2010ರ ಏಪ್ರಿಲ್‌ 17ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಬಿಹಾರ ಮೂಲದ ಪೈಶ್‌ ಮೊಹಮದ್‌ ನನ್ನು ಪೊಲೀಸರು ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next