Advertisement

ಭಾರತ-ಆಸೀಸ್‌ ಟಿ20 ಬೆಂಗ್ಳೂರಿನಿಂದ ಸ್ಥಳಾಂತರ

12:30 AM Feb 03, 2019 | Team Udayavani |

ಬೆಂಗಳೂರು: ಉದ್ಯಾನನಗರಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ.24ರಂದು ನಡೆಯಬೇಕಿದ್ದ ಭಾರತ-ಆಸ್ಟ್ರೇಲಿಯ ನಡುವಿನ ಮೊದಲ ಟಿ20 ಪಂದ್ಯವನ್ನು ವಿಶಾಖಪಟ್ಟಣಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿಯಲ್ಲಿ ಫೆ.27ಕ್ಕೆ ವಿಶಾಖಪಟ್ಟಣದಲ್ಲಿ ನಡೆಯ ಬೇಕಿದ್ದ 2ನೇ ಟಿ20 ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ವರ್ಗಾಯಿಸಿದೆ ಎಂದು ಕೆಎಸ್‌ಸಿಎ ಮಾಧ್ಯಮ ವಕ್ತಾರ ವಿನಯ್‌ ಮತ್ಯುಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಫೆ.24ರಂದು ಬೆಂಗಳೂರಿನಲ್ಲಿ ಏರೋ ಇಂಡಿಯಾ ಶೋ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪಂದ್ಯಕ್ಕೆ ಪೊಲೀಸ್‌ ಭದ್ರತೆ ನೀಡಲಾ ಗುವುದಿಲ್ಲ ಎಂದು ರಾಜ್ಯ ಪೊಲೀಸ್‌ ಇಲಾಖೆ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಗೆ ಹೇಳಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯ ಆಯೋಜಿಸುವುದು ಕಷ್ಟವಾ ಗುತ್ತದೆ ಎಂದು ಬಿಸಿಸಿಐಗೆ (ಕೆಎಸ್‌ಸಿಎ) ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿದ ಬಿಸಿಸಿಐ ಪಂದ್ಯವನ್ನು ಬದಲಾಯಿ ಸಿಕೊಳ್ಳಲು ಗ್ರೀನ್‌ ಸಿಗ್ನಲ್‌ ನೀಡಿತು. ಈ ಪ್ರಕಾರವಾಗಿ ವೇಳಾಪಟ್ಟಿಯನ್ನು ಬದಲಾಯಿಸ ಲಾಗಿದೆ. ಆಸ್ಟ್ರೇಲಿಯ ತಂಡವು ಎರಡು ಟಿ20 ಹಾಗೂ 5 ಏಕದಿನ ಪಂದ್ಯವನ್ನಾಡಲು ಭಾರತಕ್ಕೆ ಆಗಮಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next