Advertisement

ಚಿಂತಾಮಣಿ : ಅಪರಿಚಿತ ವಾಹನ ಡಿಕ್ಕಿ |ಪಾದಚಾರಿ ಸಾವು

09:28 PM Oct 17, 2021 | Team Udayavani |

ಚಿಂತಾಮಣಿ : ರಸ್ತೆಬದಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 7.30 ಕ್ಕೆ ಸಂಭವಿಸಿದೆ.

Advertisement

ತಾಲೂಕಿನ ಕೊಂಗನಹಳ್ಳಿ ಬಳಿ ಬೆಂಗಳೂರು-ಕಡಪ ರಾಜ್ಯ ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಬೆಂಗಳೂರು ಕಡೆಯಿಂದ ಅತಿ ವೇಗ ಮತ್ತು ಅಜಾಗ್ರತೆಯಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು, ಆತನ ಮೇಲೆ ಹತ್ತಿಸಿಕೊಂಡು ಹೋಗಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿಯ ಕಾಲು ಮುರಿದು ತಲೆಗೆ ಗಂಭೀರಗಾಯವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ನಾಗದೇನಹಳ್ಳಿ ನಿವಾಸಿ ನಾರಾಯಣಸ್ವಾಮಿ (55) ಎಂದು ಗುರ್ತಿಸಲಾಗಿದೆ. ವ್ಯಕ್ತಿಗೆ ಡಿಕ್ಕಿ ಹೊಡೆದ ವಾಹನ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next