Advertisement

ಕೊರೊನಾ ಕರ್ಫ್ಯೂ: ಎರಡನೇ ದಿನ ಕಟ್ಟುನಿಟ್ಟಿನ ಅನುಷ್ಠಾನ

06:55 PM May 12, 2021 | Team Udayavani |

ಚಿತ್ರದುರ್ಗ: ಜಿಲ್ಲೆಗೆ ಖಾಸಗಿ ಆಸ್ಪತ್ರೆಯಲ್ಲಿನ ಕೋವಿಡ್‌ ರೋಗಿಗಳ ಚಿಕಿತ್ಸೆಗಾಗಿ ಪ್ರತಿ ನಿತ್ಯ 300 ಹಾಗೂ ಸರ್ಕಾರಿ ಆಸ್ಪತೆಚಿತ್ರದುರ್ಗ: ರಾಜ್ಯ ಸರ್ಕಾರ ಜಾರಿ ಮಾಡಿರುವ ಕೊರೊನಾ ಕರ್ಫ್ಯೂ ಜಿಲ್ಲೆಯಲ್ಲಿ ಎರಡನೇ ದಿನ ಕಟ್ಟುನಿಟ್ಟಾಗಿ ಅನುಷ್ಠಾನಗೊಂಡಿತು.

Advertisement

ಬೆಳಗ್ಗೆ 6 ರಿಂದ 10 ಗಂಟೆವರೆಗೆ ಇದ್ದ ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀ ದಿ ಅವ ಧಿಯಲ್ಲಿ ಮಾತ್ರ ಜನ ರಸ್ತೆಗೆ ಬಂದಿದ್ದನ್ನು ಹೊರತುಪಡಿಸಿದರೆ ಇಡೀ ದಿನ ಎಲ್ಲಾ ರಸ್ತೆಗಳು ಖಾಲಿಯಾಗಿದ್ದವು. ಲಾಕ್‌ಡೌನ್‌ ಮೊದಲ ದಿನ ಕಾಲ್ನಡಿಗೆಯಲ್ಲೇ ಮಾರುಕಟ್ಟೆಗೆ ಬರಬೇಕು ಎಂಬ ಕಠಿಣ ನಿಯಮ ವಿಧಿ ಸಿದ್ದ ಪೊಲೀಸರು, ನೂರಾರು ವಾಹನಗಳನ್ನು ಜಪ್ತಿ ಮಾಡಿ ದೂರು ದಾಖಲಿಸಿದ್ದಾರೆ. ಇದೆಲ್ಲದರ ಪರಿಣಾಮ ಅನಗತ್ಯವಾಗಿ ರಸ್ತೆಗೆ ಬರುವವರ ಸಂಖ್ಯೆ ಸಹಜವಾಗಿ ಕಡಿಮೆಯಾಗಿತ್ತು.

ಕಾಕತಾಳಿಯ ಎಂಬಂತೆ ನಗರದ ಜಗದ್ಗುರು ಜಯದೇವ ಕ್ರೀಡಾಂಗಣ ಹಾಗೂ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುವ ಸಂತೆಯಲ್ಲಿ ಕೂಡ ಜನರ ಓಡಾಟ ವಿರಳವಾಗಿತ್ತು. ಅಂತಾರಾಜ್ಯ ಹಾಗೂ ಅಂತರ್‌ ಜಿಲ್ಲಾ ಚೆಕ್‌ ಪೋಸ್ಟ್‌ಗಳು ಕ್ರಿಯಾಶೀಲವಾಗಿರುವ ಪರಿಣಾಮ ಜಿಲ್ಲೆಯ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಪೊಲೀಸರು ರಾಜ್ಯದ ಗಡಿ ಭಾಗದ ರಸ್ತೆಗಳನ್ನು ಸಂಪೂರ್ಣ ಬಂದ್‌ ಮಾಡಿದ್ದರಿಂದ ಪಕ್ಕದ ಆಂಧ್ರಪ್ರದೇಶ ಹಾಗೂ ಅಲ್ಲಿಂದ ಕರ್ನಾಟಕ ಪ್ರವೇಶ ಮಾಡುವವರ ಸಂಖ್ಯೆ ಸಂಪೂರ್ಣ ನಿಂತು ಹೋಗಿದೆ.

ಮೊದಲ ದಿನ ಬರೋಬ್ಬರಿ 460 ವಾಹನ ಜಪ್ತಿ: ಪೊಲೀಸ್‌ ಇಲಾಖೆ ನಡೆಸಿದ ಕಟ್ಟುನಿಟ್ಟಿನ ಕಾರ್ಯಾಚರಣೆ ಪರಿಣಾಮ ಲಾಕ್‌ಡೌನ್‌ ಮೊದಲ ದಿನವಾದ ಸೋಮವಾರ ನಿಯಮ ಮೀರಿ ರಸ್ತೆಗೆ ಬಂದವರ 460 ವಾಹನಗಳನ್ನು ಜಪ್ತಿ ಮಾಡಿ, 467 ಮಂದಿ ಮೇಲೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಕರ್ನಾಟಕ ಎಪಿಡಮಿಕ್‌ ಕಾಯ್ದೆ ಅಡಿ 56 ಜನರ ಮೇಲೆ ದೂರು ದಾಖಲಾದರೆ, ಮಾಸ್ಕ್ ಧರಿಸದ ಕಾರಣಕ್ಕೆ 279 ಮಂದಿಯ ಮೇಲೆ ದೂರು ದಾಖಲಿಸಿ 27,900 ರೂ. ದಂಡದ ಮೊತ್ತ ಸಂಗ್ರಹಿಸಲಾಗಿದೆ. ಸಾಮಾಜಿಕ ಅಂತರ ಮರೆತು ಗುಂಪು ಕಟ್ಟಿಕೊಂಡಿದ್ದಕ್ಕೆ ಸಂಬಂ ಸಿದಂತೆ 46 ಪ್ರಕರಣ ದಾಖಲಾಗಿದ್ದು, 5100 ರೂ. ದಂಡ ಸಂಗ್ರಹವಾಗಿದೆ. ಒಟ್ಟಾರೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಉಲ್ಲಂಘನೆಗೆ ಸಂಬಂಸಿದಂತೆ ಸೋಮವಾರ ಜಿಲ್ಲೆಯಲ್ಲಿ 325 ಪ್ರಕರಣ ದಾಖಲಿಸಿ, 33 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ 800 ಸೇರಿ 1100 ರೆಮ್‌ ಡೆಸಿವರ್‌ ಚುಚ್ಚುಮದ್ದು ಅಗತ್ಯವಿದೆ. ಇದಕ್ಕಿಂತಲೂ ಕಡಿಮೆ ಪೂರೈಕೆಯಾಗುತ್ತಿರುವುದರಿಂದ ಸಮಸ್ಯೆಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದು, ಪೂರೈಕೆಗೆ ಕ್ರಮ ವಹಿಸಲಾಗುತ್ತದೆ ಎಂದು ಸಮಾಜಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಮಂಗಳವಾರ ಶಾಸಕರು ಹಾಗೂ ಜಿಲ್ಲಾ ಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿ ಕಾರಿಗಳೊಂದಿಗೆ ನಡೆಸಿದ ಕೋವಿಡ್‌ ನಿರ್ವಹಣಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾಸ್ಪತ್ರೆಯಲ್ಲಿ ಈಗಿರುವ 175 ಬೆಡ್‌ಗಳ ಜೊತೆಗೆ 200 ಹೆಚ್ಚುವರಿ ಬೆಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಪ್ರತಿನಿತ್ಯ 6 ಸಾವಿರ ಲೀಟರ್‌ ಆಕ್ಸಿಜನ್‌ ಬೇಕಾಗುತ್ತದೆ. ಇತರೆ ಸಾರ್ವಜನಿಕ ಆಸ್ಪತ್ರೆ, ಡೆಡಿಕೇಟೆಡ್‌ ಕೋವಿಡ್‌ ಕೇರ್‌ ಸೆಂಟರ್‌ಗಳು ಸೇರಿದಂತೆ ಒಟ್ಟು 16,154 ಲೀಟರ್‌ ಆಕ್ಸಿಜನ್‌ ಅಗತ್ಯವಿದ್ದು, ಸುಮಾರು 15,000 ಲೀಟರ್‌ ಪೂರೈಕೆಯಾಗುತ್ತಿದೆ ಎಂದರು.

Advertisement

ಎಸ್‌ಡಿಆರ್‌ಎಫ್‌ನಡಿ ಜಿಲ್ಲೆಗೆ 20 ಕೋಟಿ ರೂ. ಮಂಜೂರಾಗಿದ್ದು, ಇದರಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಇದು ನಿರ್ಮಾಣವಾಗಲಿದೆ. ಪ್ರತಿ ತಾಲೂಕಿನಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆ ಸೇರಿದಂತೆ ಜಿಲ್ಲೆಯಲ್ಲಿನ ಸ್ಟೀಲ್‌ ಇಂಡಸ್ಟ್ರೀಸ್‌ಗಳಲ್ಲಿ ಆಕ್ಸಿಜನ್‌ ಉತ್ಪಾದನೆ ಮಾಡಲು ಉತ್ತೇಜಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ವೇದಾಂತ ಕಂಪನಿಯಿಂದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ 100 ಹಾಸಿಗೆ ಸಾಮರ್ಥ್ಯದ ಟೆಂಟ್‌ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತಿದೆ. ಆದಷ್ಟು ಬೇಗ ಜನಸೇವೆಗೆ ಲಭ್ಯವಾಗಲಿದೆ ಎಂದ ಸಚಿವರು, ಜಿಲ್ಲೆಯ ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಜಿ.ಎಚ್‌. ತಿಪ್ಪಾರೆಡ್ಡಿ, ಟಿ. ರಘುಮೂರ್ತಿ, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ. ನಂದಿನಿದೇವಿ, ಜಿಲ್ಲಾ ರಕ್ಷಣಾ ಧಿಕಾರಿ ಜಿ. ರಾಧಿ ಕಾ, ಅಪರ ಜಿಲ್ಲಾ ಧಿಕಾರಿ ಇ. ಬಾಲಕೃಷ್ಣ, ಡಿಎಚ್‌ಒ ಡಾ| ಸಿ.ಎಲ್‌. ಪಾಲಾಕ್ಷ, ಜಿಲ್ಲಾ ಸರ್ಜನ್‌ ಡಾ| ಬಸವರಾಜಪ್ಪ, ಜಿಲ್ಲಾ ಸರ್ವೇಕ್ಷಣಾಧಿ  ಕಾರಿ ಡಾ| ರಂಗನಾಥ್‌ ಭಾಗವಹಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next