Advertisement

ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹರಡದಂತೆ ಅಗತ್ಯ ಕ್ರಮ

10:08 PM May 26, 2021 | Team Udayavani |

ಚಿತ್ರದುರ್ಗ: ಜಿಲ್ಲೆಯ 519 ಹಳ್ಳಿಗಳು ಕೋವಿಡ್‌ ಸೋಕಿತ ಗ್ರಾಮಗಳಾಗಿದ್ದು ಜನರು ತೊಂದರೆಗೆ ಸಿಲುಕಿದ್ದಾರೆ. ಈ ನಿಟ್ಟಿನಲ್ಲಿ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

Advertisement

ನಗರದ ತಮಟಕಲ್ಲು ರಸ್ತೆಯಲ್ಲಿರುವ ಬಿ.ಸಿ.ಎಂ ಹಾಸ್ಟೆಲ್‌ನಲ್ಲಿ ಮಂಗಳವಾರ ಜಿಲ್ಲಾಡಳಿತ ಹಾಗೂ ಪ್ರಕಾಶ್‌ ಸ್ಪಾಂಜ್‌ ಪ್ರಾಯೋಜಕತ್ವದಲ್ಲಿ 250 ಬೆಡ್‌ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ ಹಾಗೂ 20 ಆಕ್ಸಿಜನ್‌ನೆಟೆಡ್‌ ಬೆಡ್‌ ಸೌಲಭ್ಯದ ಕೋವಿಡ್‌ ಕೇರ್‌ ಸೆಂಟರ್‌ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಸಂಬಂ  ಧಿಸಿದಂತೆ ಜಿಲ್ಲೆಯಲ್ಲಿ 5,600 ಸಕ್ರಿಯ ಜಿಲ್ಲೆಯಲ್ಲಿ ಪಾಸಿಟಿವ್‌ ರೇಟ್‌ ಕಡಿಮೆ ಇದೆ.

ಜಿಲ್ಲಾಡಳಿತ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್‌ ಮಾಡುವುದರಿಂದ ಸೋಂಕು ಇಡೀ ಕುಟುಂಬಕ್ಕೆ ಹರಡುತ್ತದೆ. ಹಾಗಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪನೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 22 ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್‌-19 ಸೋಂಕು ಗ್ರಾಮೀಣ ಪ್ರದೇಶಗಳಿಗೂ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಜನರನ್ನು ಸುರಕ್ಷಿತವಾಗಿ ಕಾಪಾಡುವ ನಿಟ್ಟಿನಲ್ಲಿ ಕೋವಿಡ್‌ ಸೋಂಕಿನ ಲಕ್ಷಣಗಳಿರುವವರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಿ ಪಾಸಿಟಿವ್‌ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಗುಣಮುಖರನ್ನಾಗಿಸಲಾಗುವುದು.

ಈ ನಿಟ್ಟಿನಲ್ಲಿ ಎಲ್ಲ ಕಡೆ ಆಕ್ಸಿಜನ್‌ ಬೆಡ್‌ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಇದೇ ವೇಳೆ ನಗರದ ಬಿವಿಕೆಎಸ್‌ ಬಡಾವಣೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ 70 ಹಾಸಿಗೆ ಸಾಮರ್ಥ್ಯದ ಕೋವಿಡ್‌ ಕೇರ್‌ ಸೆಂಟರ್‌ ಆರಂಭಿಸಲಾಗಿದೆ. ಸಚಿವರು ಅಲ್ಲಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಪ್ರಸ್ತುತ ಇಲ್ಲಿ 68 ಜನರು ದಾಖಲಾಗಿದ್ದು, ದಾಖಲಾದವರಲ್ಲಿ 37 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇವರಿಗೆ ಊಟ, ವಸತಿ, ಬಿಸಿ ನೀರು ಹಾಗೂ ಎಲ್ಲಾ ಔಷಧವನ್ನು ಸರ್ಕಾರವೇ ಒದಗಿಸುತ್ತಿದ್ದು, ಚಿಕಿತ್ಸೆಗಾಗಿ ಒಬ್ಬರು ವೈದ್ಯರು, ನರ್ಸ್‌ ಮತ್ತು ಸಿಬ್ಬಂದಿಗಳಿದ್ದಾರೆ.

ಕೋವಿಡ್‌ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಪಡೆಯಬೇಕು. ಯಾರಿಗೆ ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲವೊ ಅವರಿಗಾಗಿ ಕೇರ್‌ ಸೆಂಟರ್‌ ಗಳನ್ನು ತೆರೆಯಲಾಗಿದೆ. ಜನರು ಇವುಗಳ ಉಪಯೋಗ ಪಡೆದು ತಮ್ಮ ಕುಟುಂಬವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಎಂದು ಸಚಿವ ಶ್ರೀರಾಮುಲು ಕೋರಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ಜಿಪಂ ಸಿಇಒ ಡಾ| ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿ  ಕಾರಿ ಜಿ. ರಾ ಧಿಕಾ, ಡಿಎಚ್‌ಒ ಡಾ| ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಎಚ್‌.ಜೆ. ಬಸವರಾಜಪ್ಪ, ತಹಶೀಲ್ದಾರ್‌ ಜೆ.ಸಿ.ವೆಂಕಟೇಶಯ್ಯ, ತಾಲೂಕು ಆರೋಗ್ಯಾಧಿ ಕಾರಿ ಡಾ| ಬಿ.ವಿ. ಗಿರೀಶ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next