Advertisement

ಒಳಚರಂಡಿ ಕಾಮಗಾರಿ ತ್ವರಿತಗೊಳಿಸಿ

10:52 PM Jun 25, 2021 | Team Udayavani |

ಚಿತ್ರದುರ್ಗ: ನಗರಕ್ಕೆ ಒಳಚರಂಡಿ ಕಾಮಗಾರಿ ಮಂಜೂರಾಗಿ ಹಲವು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಟ್ರೀಟ್‌ ಮೆಂಟ್‌ ಪ್ಲಾಂಟ್‌ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ. ಅಗತ್ಯವಿರುವ 5 ಕೋಟಿ ರೂ. ಅನುದಾನವನ್ನು ಡಿಎಂಎಫ್‌ ನಿಧಿ ಯಲ್ಲಿ ಬಳಸಿಕೊಳ್ಳಿ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಬಸವರಾಜ್‌ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನಗರಾಭಿವೃದ್ಧಿ ಪ್ರಾ ಧಿಕಾರ, ಕೆಯುಡಬ್ಲೂಎಸ್‌ ಮತ್ತು ಕೆಯುಐಡಿಎಫ್‌ಸಿಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ಚಿತ್ರದುರ್ಗ ನಗರದ ಒಳಚರಂಡಿ ಹಾಗೂ ಮಳೆ ನೀರು ಪಕ್ಕದ ಮಲ್ಲಾಪುರ ಕೆರೆ ಸೇರಿ ಮಲಿನಗೊಂಡಿದೆ.

ಕೆರೆ ಕೋಡಿ ಬಿದ್ದಾಗ ಗೋನೂರು, ದ್ಯಾಮವ್ವನಹಳ್ಳಿ, ಕಲ್ಲಹಳ್ಳಿ ಕೆರೆ ಮೂಲಕ ಚಳ್ಳಕೆರೆ ತಾಲೂಕಿಗೆ ಹರಿದು ಹೋಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕೆರೆಗೆ ಕಾಯಕಲ್ಪ ನೀಡಲು ಸುಮಾರು 70 ಕೋಟಿ ರೂ. ಅನುದಾನದ ಅವಶ್ಯಕತೆಯಿದೆ ಎಂದು ಸಚಿವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೆರೆ ಅಭಿವೃದ್ಧಿಗೆ ಸಂಬಂಧಿ ಸಿದಂತೆ ಅಧಿಕಾರಿಗಳು ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು. ಅ ಧಿಕಾರಿಗಳು ವಿಳಂಬ ಮಾಡದೆ ಕಾರ್ಯಪ್ರವೃತ್ತರಾಗಿ ಎಂದರು.

5 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ : ಚಿತ್ರದುರ್ಗ ನಗರದ ಅರಸನ ಕೆರೆಯನ್ನು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಸಭೆ ಅನುಮೋದನೆ ನೀಡಿತು. ಕೆಲವೇ ದಿನಗಳಲ್ಲಿ ಕೆರೆಯ ಅಭಿವೃದ್ಧಿಗೆ ಸಂಬಂ  ಧಿಸಿದಂತೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸಚಿವ ಬೈರತಿ ತಿಳಿಸಿದರು.

ನಗರದಲ್ಲಿ ಉದ್ಯಾನವನಗಳು ಸಮಪರ್ಕವಾಗಿ ನಿರ್ವಹಣೆ ಆಗುತ್ತಿಲ್ಲ ಎಂಬುದನ್ನು ಶಾಸಕರು ತಿಳಿಸಿದ್ದಾರೆ. ನಗರದ ಉದ್ಯಾನವನಗಳ ಸಮರ್ಪಕ ನಿರ್ವಹಣೆಗಾಗಿ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗುವುದು. ನಗರಸಭೆ, ನಗರ ಪಾಲಿಕೆ ಆಯುಕ್ತರಿಗೆ ವಿಶೇಷವಾದ ಜವಾಬ್ದಾರಿ ನೀಡಿ ಮುಂದಿನ ದಿನಗಳಲ್ಲಿ ಅವುಗಳ ನಿರ್ವಹಣೆಗೆ ಅಧಿ  ಕಾರ ಕೊಡಲಾಗುವುದು ಎಂದರು.

Advertisement

ರೈತರ ಮನವೊಲಿಸಿ 50-50ರ ಅನುದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಾವಣೆಗಳನ್ನು ಮಾಡುವುದರ ಮೂಲಕ ಪ್ರಾಧಿಕಾರಕ್ಕೆ ಆರ್ಥಿಕ ಸಂಪನ್ಮೂಲಗಳನ್ನು ಕ್ರೂಢೀಕರಿಸುವಂತೆ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷರು ಹಾಗೂ ಆಯುಕ್ತರಿಗೆ ಸೂಚಿಸಿದರು.

ನಲ್ಲಿಗಳಿಗೆ ಮೀಟರ್‌ ಅಳವಡಿಸಿ: ಚಿತ್ರದುರ್ಗ ನಗರಕ್ಕೆ 24 ಗಂಟೆ ಕುಡಿಯುವ ನೀರು ಒದಗಿಸಲು ಅಮೃತ ಯೋಜನೆಯಡಿ 112 ಕೋಟಿ ರೂ. ಮಂಜೂರಾಗಿದೆ. 2019 ರಲ್ಲಿ ಇದನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಇದು ವಿಳಂಬವಾಗಿದ್ದು, ಡಿಸೆಂಬರ್‌ ಒಳಗಾಗಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮೀಟರ್‌ ಅಳವಡಿಸುವ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಮುಖ್ಯ ಇಂಜಿನಿಯರ್‌ಗೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಟಿ. ಬದರಿನಾಥ್‌, ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ, ನಗರಾಭಿವೃದ್ಧಿ ಪ್ರಾಧಿ ಕಾರದ ಆಯುಕ್ತ ಸೋಮಶೇಖರ್‌, ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next