Advertisement

ಸಿಎಂ ಬೊಮ್ಮಾಯಿ-ಬಿಎಸ್‌ವೈರಿಂದ ತರಳಬಾಳು ಜಗದ್ಗುರುಗಳ ಭೇಟಿ

06:37 PM Aug 08, 2021 | Team Udayavani |

ಸಿರಿಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನ ಆರ್‌.ಟಿ. ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

Advertisement

ದಾವಣಗೆರೆ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಇದ್ದರು. ಮುಖ್ಯಮಂತ್ರಿಗಳಿಗೆ ಆನೆಯ ಪುತ್ಥಳಿಯನ್ನು ಕೊಡುಗೆಯಾಗಿ ನೀಡಿದ ಶ್ರೀಗಳು, ರಾಜ್ಯದ ಅಭಿವೃದ್ಧಿಗೆ ಯಾವುದೇ ಅಡ್ಡಿ-ಆತಂಕಗಳು ಎದುರಾದರೂ ಅವುಗಳನ್ನು ಹಿಮ್ಮೆಟ್ಟಿ ಕೆಲಸ ಮಾಡುವಂತೆ ಕಿವಿಮಾತು ಹೇಳಿದರು. ನಂತರ ತರಳಬಾಳು ಕೇಂದ್ರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತರಳಬಾಳು ಜಗದ್ಗುರುಗಳಿಗೆ ಶಾಲು ಹೊದೆಸಿ ಫಲಪುಷ್ಪ ನೀಡಿ ಗೌರವಿಸಿದರು.ಕೆಲ ಕಾಲ ಶ್ರೀಗಳೊಂದಿಗೆ ಚರ್ಚೆ ನಡೆಸಿದರು.

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ವೇಳೆ ತರಳಬಾಳು ಶ್ರೀಗಳ ಆಶಯದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಮಂಜೂರಾಗಿವೆ. ಆ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಕೆಲವೇ ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ ಎಂಬುದಿಲ್ಲಿ ಉಲ್ಲೇಖಾರ್ಹ.

Advertisement

Udayavani is now on Telegram. Click here to join our channel and stay updated with the latest news.

Next