Advertisement

18ರಂದು ಚಿತ್ರದುರ್ಗಕ್ಕೆ ನಡ್ಡಾ ಆಗಮನ: ಶ್ರೀರಾಮುಲು

03:54 PM Jun 15, 2022 | Team Udayavani |

ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶಜೂ.18ರಂದು ಮುರುಘಾ ಮಠದಲ್ಲಿನಡೆಯುತ್ತಿದ್ದು ಬಿಜೆಪಿ ರಾಷ್ಟ್ರೀಯಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಲಿದ್ದಾರೆಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲುತಿಳಿಸಿದರು.

Advertisement

ಮುರುಘಾ ಮಠದಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕೇಂದ್ರ ಮತ್ತುರಾಜ್ಯ ಸರ್ಕಾರದ ಅನೇಕ ಜನಪರಯೋಜನೆಗಳನ್ನು ಗ್ರಾಪಂ ಮಟ್ಟದಲ್ಲಿ ಮನೆಮನೆಗೆ ತಲುಪಿಸುವ ಉದ್ದೇಶದಿಂದ ಈಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.ರಾಜ್ಯದ 6 ಸಾವಿರ ಗ್ರಾಪಂಗಳಲ್ಲಿಸುಮಾರು 4500 ಬಿಜೆಪಿ ಬೆಂಬಲಿತಸದಸ್ಯರಿದ್ದಾರೆ.

ಇದರೊಟ್ಟಿಗೆ ನಗರಸಭೆ,ಪುರಸಭೆ, ಪಪಂ, ಮಹಾನಗರ ಪಾಲಿಕೆ,ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವಪರಿಷತ್‌ ಸದಸ್ಯರು ಸಮಾವೇಶದಲ್ಲಿಭಾಗವಹಿಸುವರು. ಮಧ್ಯಾಹ್ನ 3:30ಕ್ಕೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಚಿತ್ರದುರ್ಗದ ಮುರುಘಾ ಮಠಕ್ಕೆ ಆಗಮಿಸಿಡಾ|ಶಿವಮೂರ್ತಿ ಮುರುಘಾ ಶರಣರನ್ನುಭೇಟಿ ಮಾಡಿ ಆಶೀರ್ವಾದ ಪಡೆದ ನಂತರ4 ಗಂಟೆಗೆ ಸಭೆಗೆ ಆಗಮಿಸಲಿದ್ದಾರೆ.

ಬಿಜೆಪಿರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌,ಸಿಎಂ ಬಸವರಾಜ ಬೊಮ್ಮಾಯಿ, ಮಾಜಿಸಿಎಂ ಬಿ.ಎಸ್‌. ಯಡಿಯೂರಪ್ಪ, ಕೇಂದ್ರಸಚಿವ ಎ. ನಾರಾಯಣಸ್ವಾಮಿ, ಸಂಸದರು,ಸಚಿವರು, ಶಾಸಕರು ಸೇರಿದಂತೆ ಅನೇಕಜನಪ್ರತಿನಿ ಧಿಗಳು ಪಾಲ್ಗೊಳ್ಳುವರುಎಂದರು.

Advertisement

Udayavani is now on Telegram. Click here to join our channel and stay updated with the latest news.

Next