Advertisement

ಚಿತ್ರದುರ್ಗ: ಕಾರುಗಳ‌ ನಡುವೆ ಢಿಕ್ಕಿ; ಇಬ್ಬರು ಸಾವು, ಹಲವರಿಗೆ ಗಾಯ

06:17 PM Jan 26, 2021 | Team Udayavani |

ಚಿತ್ರದುರ್ಗ: ಕಾರುಗಳ‌ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮೊಳಕಾಲ್ಮೂರು ತಾಲೂಕಿನ ಕೊಮ್ಮನಪಟ್ಟಿ ಗ್ರಾಮದಲ್ಲಿ ನಡೆದಿದೆ.

Advertisement

ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಈ ಅಪಘಾತ  ನಡೆದಿದ್ದು, ಮಾರುತಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ವನಜಾಕ್ಷಿ(36), ಹುಂಡೈ ಕಾರಿನಲ್ಲಿದ್ದ ಚಿತ್ರದುರ್ಗ ಮೂಲದ ಮಹೇಂದ್ರ(50)  ಮೃತಪಟ್ಟಿದ್ದಾರೆ.

ಸುಮಾರು ಎಂಟು ಜನರಿಗೆ ಗಾಯಗೊಂಡಿದ್ದು, ಇವರನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೊಳಕಾಲ್ಮೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಹೆಚ್ಚುವರಿ ಅರೆಸೇನಾಪಡೆ ನಿಯೋಜನೆ, ಉನ್ನತ ಮಟ್ಟದ ಸಭೆ; ಇಂಟರ್ನೆಟ್ ಸ್ಥಗಿತ

Advertisement

Advertisement

Udayavani is now on Telegram. Click here to join our channel and stay updated with the latest news.

Next