Advertisement

ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೆ ಸಹಾಯವಾಣಿ ಆರಂಭ

06:58 PM Jun 12, 2020 | Naveen |

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಕೋವಿಡ್‌ -19 ವೈರಸ್‌ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಉಂಟಾದ ಸಾರಿಗೆ ಸಂಪರ್ಕದ ಸಮಸ್ಯೆಯಿಂದ ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಸಾರಿಗೆ ವ್ಯವಸ್ಥೆ ಅಗತ್ಯವಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಖಾಸಗಿ ಅನುದಾನಿತ, ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಲಭ್ಯವಿರುವ ವಾಹನಗಳನ್ನು ನಿಯೋಜಿಸಲು ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಕ್ರಮ ವಹಿಸಲಾಗಿದೆ.

Advertisement

ವಿದ್ಯಾರ್ಥಿಗಳಿಗೆ ಸಾರಿಗೆ ಸೌಕರ್ಯದ ಕುರಿತ ಮಾಹಿತಿಯನ್ನು ಆಯಾ ಪ್ರೌಢಶಾಲಾ ಮುಖ್ಯಸ್ಥರ ಮೂಲಕ ತಿಳಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕುರಿತ ಯಾವುದೇ ಗೊಂದಲಗಳ ಪರಿಹಾರಕ್ಕಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಲಾಗಿದ್ದು, ಸಹಾಯವಾಣಿಗೆ ಸರ್ಕಾರಿ ರಜಾ ದಿನ ಹೊರತುಪಡಿಸಿ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಡಿಡಿಪಿಐ ರವಿಶಂಕರ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯವಾಣಿ ಸಂಖ್ಯೆ: ಜಿಲ್ಲಾ ಸಹಾಯವಾಣಿ 08194-222259, ನೋಡಲ್‌
ಅಧಿಕಾರಿ-9945713933. ಉಳಿದಂತೆ ಆಯಾ ತಾಲೂಕಿನ ಸಹಾಯವಾಣಿ ಸಂಖ್ಯೆ ಹಾಗೂ ನೋಡಲ್‌ ಅಧಿಕಾರಿ ಸಂಖ್ಯೆ ವಿವರ ಇಂತಿದೆ. ಚಳ್ಳಕೆರೆ 08195-222296, 9886799923. ಚಿತ್ರದುರ್ಗ 08194-222236, 9620064547. ಹಿರಿಯೂರು 08193-263260, 7019451504. ಹೊಸದುರ್ಗ 08199- 230225, 8762747132. ಹೊಳಲ್ಕೆರೆ 08191-275223, 7899460068, 9113671933. ಮೊಳಕಾಲ್ಮೂರು 08198-229242, 9036456532.

Advertisement

Udayavani is now on Telegram. Click here to join our channel and stay updated with the latest news.

Next