Advertisement

ಚಿತ್ರದುರ್ಗ: ಟ್ಯಾಂಕರ್ ಗೆ ಓಮ್ನಿ ಡಿಕ್ಕಿ ಮೂವರ ಸಾವು

10:13 PM Jan 06, 2021 | Team Udayavani |

ಚಿತ್ರದುರ್ಗ: ತಾಲ್ಲೂಕಿನ ಕ್ಯಾದಿಗೆರೆ ಸಮೀಪದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಆಮ್ನಿ ಡಿಕ್ಕಿ ಹೊಡೆದು ಮೂವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

Advertisement

ಬೆಂಗಳೂರಿನ ಕೆಂಗೇರಿ ನಿವಾಸಿ ರೇಣುಕಮ್ಮ (68) ಸ್ಥಳದಲ್ಲೇ ಮೃತಪಟ್ಟಿದ್ದು ಅವರ ಪುತ್ರ ಶಂಕರ್‌ (39) ಹಾಗೂ ಶಿವರಾಜು (45) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರೇಣುಕಮ್ಮ ಅವರ ಸೊಸೆ ಜಯಶ್ರೀ (29), ಮೊಮ್ಮಕ್ಕಳಾದ ಮಕ್ಕಳಾದ ಶೋಬಿತಾ (7) ಹಾಗೂ ಮೌನಿಕ (5) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಂಕರ್‌ ಅವರು ಕಾರ್ಯನಿಮಿತ್ತ ಬೆಂಗಳೂರಿನಿಂದ ದಾವಣಗೆರೆಗೆ ಕುಟುಂಬ ಸಮೇತ ಬಂದಿದ್ದರು. ನಸುಕಿನ 3 ಗಂಟೆಗೆ ಪ್ರಯಾಣ ಆರಂಭಿಸಿದ್ದರು. ಕೆಲಸ ಮುಗಿಸಿ ಬೆಂಗಳೂರಿಗೆ ಮರಳುವಾಗ ಈ ಅಪಘಾತ ನಡೆದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next