Advertisement

Chitradurga: ಕಾರು-ಲಾರಿ ಭೀಕರ ಅಪಘಾತ; 8 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತ್ಯು

08:00 AM Aug 13, 2023 | Team Udayavani |

ಚಿತ್ರದುರ್ಗ: ನಗರದ ಹೊರವಲಯದ ಮಲ್ಲಾಪುರ ಮೇಲ್ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 8 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ವಿಜಯಪುರ ನಿವಾಸಿಗಳಾದ ಭೀಮಾಶಂಕರ (26 ವರ್ಷ), ಕಾರು ಚಾಲಕ ಸಂಗನ ಬಸಪ್ಪ (36 ವರ್ಷ), ರೇಖಾ w/o ಸಂಗನ ಬಸಪ್ಪ (29 ವರ್ಷ), ಅಗಸ್ತ್ಯ s/o ಸಂಗನ ಬಸಪ್ಪ (8 ವರ್ಷ) ಮೃತರು.

ಇನ್ನೂ ಸಂಗನ ಬಸಪ್ಪ ಅವರ ಮಕ್ಕಳಾದ 6 ವರ್ಷದ ಅನ್ವಿತಾ, 4 ವರ್ಷದ ಆದರ್ಶ ಹಾಗೂ ಸುಮಾರು 26 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲರೂ ವಿಜಯಪುರ ನಿವಾಸಿಗಳಾಗಿದ್ದು, ಸಂಗಣ್ಣ ಬಸಪ್ಪ ಮತ್ತು ಅವರ ಸಂಬಂಧಿ ಈರಣ್ಣ ಅವರ ಕುಟುಂಬದವರು ಪ್ರವಾಸಕ್ಕಾಗಿ ಚಿಕ್ಕಮಗಳೂರಿಗೆ ತೆರಳುತ್ತಿದ್ದರು. ಮತ್ತೊಂದು ಕಾರಿನಲ್ಲಿ ಈರಣ್ಣನವರ ಕುಟುಂಬವಿತ್ತು.

ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ‌ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ.

Advertisement

ಚಿತ್ರದುರ್ಗದ ಬಳಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಜಿಲ್ಲೆಯ ಕುದರಿ ಸಾಲವಾಡಗಿ ಗ್ರಾಮದ ನಾಲ್ವರು ಮೃತಪಟ್ಟಿದ್ದು, ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಗ್ರಾಮದ ಮಟ್ಟಿಗೆ ಆಷಾಡದ ಎರಡನೇ ಭಾನುವಾರ ಕರಾಳ ಭಾನುವಾರವಾಗಿದೆ.

ಕುಟುಂಬದವರೊಂದಿಗೆ ಚಿಕ್ಕಮಗಳೂರು ಪ್ರವಾಸಕ್ಕೆ ಹೊರಟಿದ್ದ ಸಂಗಬಸಪ್ಪ ಹಾಗೂ ಅವರ ಕುಟುಂಬ ಸದಸ್ಯರಿದ್ದ ಕಾರು ಚಿತ್ರದುರ್ಗದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ಚಿಕ್ಕಮಗಳೂರ ಪ್ರವಾಸಕ್ಕೆಂದು ಶನಿವಾರ ರಾತ್ರಿ 11 ಗಂಟೆಗೆ ಸ್ವಗ್ರಾಮದಿಂದ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಚಿಕ್ಕಮಗಳೂರು ತಲುಪುವ ಮುನ್ನವೇ ಅಪಘಾತದಲ್ಲಿ ಮೃತಪಟ್ಟಿದ್ದು, ಸುದ್ದಿ ತಿಳದ ಕುಟುಂಬ ಚಿತ್ರದುರ್ಗದತ್ತ ಧಾವಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next