Advertisement

ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು; 3 ಮಕ್ಕಳು ಸೇರಿ ನಾಲ್ವರ ದುರ್ಮರಣ

10:04 AM Jan 25, 2024 | Team Udayavani |

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿಯಾಗಿ 3 ಮಕ್ಕಳು ಸೇರಿ ನಾಲ್ವರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಬಳಿ ನಡೆದಿದೆ.

Advertisement

ಭೀಕರ ಅಪಘಾತದಲ್ಲಿ ಲಿಂಗಪ್ಪ (26 ವರ್ಷ), ಸಿಂಧು ಶ್ರೀ(2 ವರ್ಷ ), ಅಯ್ಯಳಪ್ಪ (5 ತಿಂಗಳು), ರಕ್ಷಾ(3 ತಿಂಗಳು) ಮೃತ ದುರ್ದೈವಿಗಳು.

ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಬೀರ ಗಾಯಗೊಂಡಿದ್ದು, ಗಾಯಾಳುಗಳಾದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ (35) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ನಿವಾಸಿಗಳಾಗಿದ್ದು, ಇವರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ.

ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿದ್ರೆ ಮಂಪರಿನಲ್ಲಿ ನಸುಕಿನ ವೇಳೆ ನಡೆದಿರುವ ಘಟನೆ ಎನ್ನಲಾಗಿದೆ.

Advertisement

ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next