Advertisement

ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ 957 ಜನ ಕೋವಿಡ್ ನಿಂದ ಗುಣಮುಖ

05:56 PM Oct 11, 2020 | sudhir |

ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಕೋವಿಡ್‍ ಸೋಂಕಿನಿಂದಾಗಿ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 957 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Advertisement

ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 382 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9652 ಕ್ಕೆ ಏರಿಕೆಯಾಗಿದೆ.

ಭಾನುವಾರ ಒಟ್ಟು 1543 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 392 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 9652ಕ್ಕೆ ಏರಿಕೆಯಾಗಿದ್ದು, ಇಂದು 4 ಜನರು ಮೃತಪಟ್ಟಿದ್ದು ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8177 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1383 ಸಕ್ರಿಯ ಪ್ರಕರಣಗಳು ಇವೆ.

ಇದನ್ನೂ ಓದಿ :ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿದ್ದ ಬಸ್ಸಿಗೆ ರೈಲು ಡಿಕ್ಕಿ 18 ಸಾವು, 40ಕ್ಕೂ ಹೆಚ್ಚು ಗಾಯ

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 74010 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

Advertisement

ಈವರೆಗೆ 77809 ಜನರ ಮಾದರಿ ಸಂಗ್ರಹಿಸಲಾಗಿದ್ದು, 67550 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 121 ಜನರ ವರದಿ ಬರುವುದು ಬಾಕಿ ಇದೆ. 486 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ತುಳಸಿರಂಗನಾಥ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next