Advertisement

ಚಿತ್ರದುರ್ಗ: ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಮೂವರ ದಾರುಣ ಸಾವು

09:50 AM Jan 03, 2020 | Team Udayavani |

ಚಿತ್ರದುರ್ಗ: ಸಿಲಿಂಡರ್ ಸ್ಪೋಟಗೊಂಡು ಒಂದೇ‌ ಮನೆಯ ಮೂರು ಜನ ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳಗ್ಗೆ ನಗರದ ಗಾರೇಹಟ್ಟಿ ಬಡಾವಣೆಯಲ್ಲಿ ನಡೆದಿದೆ.

Advertisement

ಗಾರೆಹಟ್ಟಿ ನಿವಾಸಿ, ಬಸ್ ಕಂಡಕ್ಟರ್ ಆಗಿದ್ದ ಅರುಣ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟವಾಗಿದ್ದು, ದಂಪತಿ ಹಾಗೂ ಮಗು ಸೇರಿ ಮೂರು ಜನ ಮೃತಪಟ್ಟಿದ್ದಾರೆ.

ಅರುಣ್ (40), ಪತ್ನಿ ಲತಾ (35), ಹಾಗೂ 7ನೇ ತರಗತಿ ವಿದ್ಯಾರ್ಥಿನಿ ಪುತ್ರಿ ಅಮೃತಾ(13) ಮೃತಪಟ್ಟವರು.

ಸ್ಪೋಟದ ರಭಸಕ್ಕೆ ಮನೆಯಲ್ಲಿನ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿವೆ. ಮೂರು ಜನರ ಮೃತ ದೇಹಗಳು‌ ಅರೆಬರೆ ಸುಟ್ಟಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಬೆಂಕಿ‌ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next