Advertisement

ನೀರು ಅತ್ಯಮೂಲ್ಯ ಸಂಪತ್ತು

12:03 PM Jul 09, 2020 | Naveen |

ಚಿತ್ರದುರ್ಗ: ನೀರು ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸಾಧ್ಯವಾದಷ್ಟು ಮಿತವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಬಾರದು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

Advertisement

ನಗರದ ಜೋಗಿಮಟ್ಟಿ ರಸ್ತೆಯ ಅಜ್ಜಯ್ಯ ದೇವಸ್ಥಾನದ ಬಳಿ ಕುಡಿಯುವ ನೀರಿನ ಸಂಪರ್ಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸುಮಾರು 40 ವರ್ಷಗಳಿಂದ ಈ ಭಾಗದ ಜನರು ನೀರಿಗಾಗಿ ಅಲೆದಾಡುವ ಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿ ಟೀಚರ್ಸ್‌ ಕಾಲೋನಿ ಬಳಿ ಇರುವ ಓವರ್‌ಹೆಡ್‌ ಟ್ಯಾಂಕ್‌ನಿಂದ ನೀರಿನ ಸಂಪರ್ಕ ನೀಡಲಾಗಿದೆ. ಮನೆ ಬಾಗಿಲಿಗೆ ನೀರು ಬರುತ್ತದೆ ಎಂದು ನೀರು ಪೋಲು ಮಾಡದೆ ಮಿತವಾಗಿ ಬಳಸಬೇಕೆಂದರು.

ಇದೇ ವೇಳೆ ಬ್ಯಾಂಕ್‌ ಕಾಲೋನಿಯಲ್ಲೂ ಕುಡಿಯುವ ನೀರಿನ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಶ್ರೀನಿವಾಸ್‌, ಮಾಜಿ ಸದಸ್ಯ ಮಹೇಶ್‌, ಗರಡಿ ಪ್ರಕಾಶ್‌, ಪೌರಾಯುಕ್ತ ಹನುಮಂತರಾಜು, ಇಂಜಿನಿಯರ್‌ಗಳಾದ ಮನೋಹರ್‌, ಕಿರಣ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next