Advertisement

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

12:03 AM Apr 19, 2024 | Team Udayavani |

ಚಿತ್ರದುರ್ಗ: ಮುಸ್ಲಿಂ ಯುವತಿಗೆ ಡ್ರಾಪ್‌ ನೀಡಿದ‌ ಕಾರಣಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ‌ ಚಿತ್ರದುರ್ಗ ನಗರದಲ್ಲಿ ನಡೆದಿದೆ.

Advertisement

ನಗರದ‌ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಈರಜ್ಜನಹಟ್ಟಿ ಗ್ರಾಮದ‌‌ ಉಮೇಶ್ ಹಲ್ಲೆಗೊಳಗಾದವರು. ಅದೇ ಬಟ್ಟೆ ಅಂಗಡಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ ಯುವತಿಯನ್ನು ಮನೆಗೆ ಡ್ರಾಪ್ ಮಾಡಿದ ಹಿನ್ನೆಲೆಯಲ್ಲಿ ಚೇಳುಗುಡ್ಡದ ಬಳಿ ನೈತಿಕ ಪೊಲೀಸ್ ಗಿರಿ ಮಾಡಲಾಗಿದೆ ಎಂದು‌ ಆರೋಪಿಸಲಾಗಿದೆ.

ಹಲ್ಲೆಗೊಳಗಾದ ಯುವಕ ಉಮೇಶ್ ಜಿಲ್ಲಾ ಆಸ್ಪತ್ರೆಗೆ‌ ದಾಖಲಾಗಿದ್ದು, ಆಸ್ಪತ್ರೆ ಬಳಿ‌ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಧಿಕ್ಕಾರ ಕೂಗಿ, ಹಲ್ಲೆ ನಡೆಸಿದವರ ಬಂಧನಕ್ಕೆ ಒತ್ತಾಯಿಸಿದ್ದಾರೆ.

ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಆಸ್ಪತ್ರೆಗೆ ಭೇಟಿ‌ ನೀಡಿ, ಉಮೇಶ್ ಬಳಿ ಮಾಹಿತಿ ಪಡೆದುಕೊಂಡಿದ್ದಾರೆ. ಬಿಜೆಪಿ‌ ಅಭ್ಯರ್ಥಿ ಗೋವಿಂದ ಕಾರಜೋಳ ಪುತ್ರ ಉಮೇಶ್ ಕಾರಜೋಳ ಕೂಡಾ‌ ಆಸ್ಪತ್ರೆಗೆ‌ ಭೇಟಿ‌‌ ನೀಡಿ ಯುವಕನ ಆರೋಗ್ಯ ವಿಚಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next