Advertisement

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ

01:10 PM May 06, 2020 | Naveen |

ಚಿತ್ರದುರ್ಗ: ಜಿಲ್ಲೆಯಲ್ಲಿ ತುರ್ತಾಗಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಹಾಗೂ ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡರು ಕಾರ್ಯಕರ್ತರು ಮಂಗಳವಾರ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.

Advertisement

ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಕ್ವಿಂಟಾಲ್‌ಗೆ 1760 ರೂ. ನೀಡಿ ಖರೀ ದಿಸುವುದಾಗಿ ಆದೇಶ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ತಕ್ಷಣ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ರೈತರು ಹಿಂಗಾರು ಹಂಗಾಮಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದು, ಈಗಾಗಲೇ ಸುಮಾರು 45 ದಿವಸಗಳ ಹಿಂದೆ ಕಟಾವಾಗಿದೆ. ಬೆಲೆ ಕುಸಿತದಿಂದ ಮಾರಾಟವಾಗದೆ ಅರ್ಧದಷ್ಟು ಈರುಳ್ಳಿ ನಾಶವಾಗಿದೆ. ಕೊರೊನಾ ಸಮಸ್ಯೆಯಿಂದ ಯಾವ ಖರೀದಿದಾರರು ಬಂದರೂ ಕನಿಷ್ಠ ಮೊತ್ತಕ್ಕೆ ಕೇಳಿ ವಾಪಸ್‌ ಹೋಗುತ್ತಿದ್ದಾರೆ. ಆದ್ದರಿಂದ ಈರುಳ್ಳಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿ ಈರುಳ್ಳಿ ಖರೀದಿ ಕೇಂದ್ರವನ್ನು ಆರಂಭಿಸಬೇಕು. ಹೂವಿನ ಬೆಳೆಗಾರರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ಘೋಷಣೆ ಮಾಡಿ 45 ದಿನ ಕಳೆದಿದೆ. ಇದುವರೆಗೆ ಪರಿಹಾರ ಮೊತ್ತ ಘೋಷಣೆಯಾಗಿಲ್ಲ. ಇದನ್ನೂ ತ್ವರಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next