Advertisement

Chitradurga: ಶಾಲಾ ಬಿಸಿಯೂಟ ಸೇವಿಸಿದ 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

06:42 PM Dec 27, 2023 | Team Udayavani |

ಭರಮಸಾಗರ:ಬೀರಾವರ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಬಿಸಿಯೂಟ ಸೇವಿಸಿದ ಬಳಿಕ ವಾಂತಿ ಭೇದಿ ಉಂಟಾದ ಹಿನ್ನೆಲೆಯಲ್ಲಿ ಸುಮಾರು 60 ಕ್ಕೂ ಹೆಚ್ಚು ಮಕ್ಕಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿರುವ ಘಟನೆ ನಡೆದಿದೆ.

Advertisement

ಬುಧವಾರ ಮದ್ಯಾಹ್ನ ಬಿಸಿಯೂಟ ಸೇವಿಸಿ ಮನೆಗೆ ತೆರಳಿದ ನಾಲ್ಕಾರು ಮಕ್ಕಳಿಗೆ ವಾಂತಿಭೇದಿ ಸೇರಿದಂತೆ ಅಸ್ವಸ್ಥಗೊಂಡ ಘಟನೆ ಜರುಗಿದೆ. ಬಳಿಕ ಇನ್ನಿತ್ತರ ಕೆಲ ಮಕ್ಕಳ ಆರೋಗ್ಯ ದಲ್ಲಿ ಏರುಪೇರು ಕಂಡು ಬಂದ ಕಾರಣ ಮೂರು ಆಂಬ್ಯುಲೆನ್ಸ್ ಗಳಲ್ಲಿ 60 ಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಶಿಕ್ಷಣ ಇಲಾಖೆ ಮತ್ತು ಅಕ್ಷರ ದಾಸೋಹ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವೈದ್ಯರ ತಪಾಸಣೆ ಬಳಿಕ ನಿಖರ ಕಾರಣ ಹೊರಬರಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next