Advertisement
ಮಹೇಶ್ ಪಿಯು ಕಾಲೇಜಿನ ಪ್ರಾಚಾರ್ಯ ಯಶವಂತ್ ಶೆಟ್ಟಿ ಮಾತನಾಡಿ, ಭಾರತ 6 ಪ್ರಧಾನ ಧರ್ಮಗಳಿಗೆ ನೆಲೆಬೀಡಾಗಿ 1600ಕ್ಕೂ ಅಧಿಕ ಭಾಷೆಗಳಿಗೆ ತವರೂರಾಗಿದೆ. ಮುಂದೊಂದು ದಿನ ಸೂರ್ಯ ಮುಳುಗದ ಸಾಮ್ರಾಜ್ಯವಾದ ಬ್ರಿಟಿಷರಿಗೆ ಸಿಂಹಸ್ವಪ್ನವಾಗುವಲ್ಲಿ ಎರಡು ಮಾತಿಲ್ಲ ಎಂಬುದನ್ನು ಮನಗಂಡು ದೇಶವನ್ನು ಇಬ್ಭಾಗ ಮಾಡಿದ ಬ್ರಿಟಿಷರು ಸ್ವಾತಂತ್ರ್ಯ ನೀಡಿ ದೇಶದಿಂದ ಹೊರ ನಡೆದರು ಎಂದು ಹೇಳಿದರು.
Related Articles
Advertisement
ತಾಲೂಕು ಕಾರ್ಯದರ್ಶಿ ಟಿ.ಆರ್. ಉಮಾಪತಿ, ಸಹ ಕಾರ್ಯದರ್ಶಿ ಸತೀಶ್, ಎಪಿಎಂಸಿ ಹಮಾಲರ ಸಂಘದ ಉಪಾಧ್ಯಕ್ಷ ಚಂದ್ರಪ್ಪ, ಡಿ.ಸಿ. ಹಾಲಸ್ವಾಮಿ, ತಿರುಮಲೇಶ್ ಜಾಧವ್, ಕಾರ್ಮಿಕ ಮುಖಂಡರಾದ ತಿಪ್ಪೇಸ್ವಾಮಿ, ಜಾಕಿರ್ ಇದ್ದರು.
ಜಿಲ್ಲಾ ವಕ್ಫ್ ಬೋರ್ಡ್: ಜಿಲ್ಲಾ ವಕ್ಫ್ ಬೋರ್ಡ್ ನೂತನ ಅಧ್ಯಕ್ಷ ಅಸ್ಲಂ ಪಾಷಾ, ವಕ್ಫ್ ಮಂಡಳಿಯಲ್ಲಿ ಧ್ವಜಾರೋಹಣ ಮಾಡಿದರು. ಇದೇ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ನಂತರ ಮಾತನಾಡಿದ ಅವರು, ಹಲವು ಹಿರಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಅದೇ ರೀತಿ ಅಂಬೇಡ್ಕರ್ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಭಾರತಕ್ಕೆ ಅತ್ಯುತ್ತಮ ಸಂವಿಧಾನ ಕೊಟ್ಟಿದ್ದಾರೆ. ಎಲ್ಲರನ್ನೂ ಸ್ಮರಿಸುವುದು ನಮ್ಮ ಕರ್ತವ್ಯ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್ ಹಾಗೂ ವಕ್ಫ್ ಮಂಡಳಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾರ್ತಾ ಇಲಾಖೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಜಿಲ್ಲಾಧಿ ಕಾರಿ ಕಚೇರಿ ಹಿಂಭಾಗದ ವಾರ್ತಾ ಇಲಾಖೆಯಲ್ಲಿ ವಾರ್ತಾಧಿಕಾರಿ ಬಿ. ಧನಂಜಯ ಧ್ವಜರೋಹಣ ನೆರವೇರಿಸಿದರು. ಸಹಾಯಕ ವಾರ್ತಾಧಿಕಾರಿ ಬಿ.ವಿ. ತುಕಾರಾಂ ರಾವ್, ಸಿನಿ ಚಾಲಕ ತಿಪ್ಪಯ್ಯ, ತುಮಕೂರು ಸಹಾಯಕ ವಾರ್ತಾ ಧಿಕಾರಿ ಕೃಷ್ಣನಾಯ್ಕ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.