Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಖಾಂತ್ಯ; ಡಿಡಿಪಿಐ ಅಭಿನಂದನೆ

04:15 PM Jul 06, 2020 | Naveen |

ಚಿತ್ರದುರ್ಗ: ಕೋವಿಡ್‌-19 ಭೀತಿಯ ನಡುವೆಯೂ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮ ಹಾಗೂ ಸುರಕ್ಷಿತವಾಗಿ ನಡೆಯಲು ಸಹಕರಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮಾಧ್ಯಮಗಳಿಗೆ ಡಿಡಿಪಿಐ ರವಿಶಂಕರ್‌ ರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಿ ಮಾರ್ಗದರ್ಶನ ಮಾಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿಪಂ ಸಿಇಒ, ಡಿಎಚ್‌ಒ, ಡಯಟ್‌ ಉಪನಿರ್ದೇಶಕರು, ತಹಶೀಲ್ದಾರ್‌ ಗಳು, ಖಜಾನಾಧಿಕಾರಿಗಳು, ಪೊಲೀಸ್‌, ವಾರ್ತಾ ಇಲಾಖೆಯ ಅಧಿಕಾರಿಗಳು, ಜಿಲ್ಲಾ ನೋಡಲ್‌ ಅಧಿಕಾರಿ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಬಿಇಒಗಳು ಸೇರಿದಂತೆ ಎಲ್ಲರಿಗೂ ವಂದಿಸಿದ್ದಾರೆ.

ಸುಮಾರು 50 ಸಾವಿರದಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್‌ ನೀಡಿದ ದಾನಿಗಳು, ಪತ್ರಿಕಾ ಮಾಧ್ಯಮ, ಟಿ.ವಿ ವಾಹಿನಿಯವರಿಗೆ ಜೊತೆಗೆ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ ಪರೀಕ್ಷೆ ಬರೆಯಲು ಅಣಿಗೊಳಿಸಿದ ಪೋಷಕರಿಗೆ ಶಿಕ್ಷಣ ಇಲಾಖೆ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next