Advertisement

ಉದ್ಯೋಗ ಖಾತ್ರಿ ಸದ್ಬಳಕೆಯಾಗಲಿ: ಪಾಟೀಲ್‌

03:34 PM May 21, 2020 | Naveen |

ಚಿತ್ತಾಪುರ: ಗ್ರಾಮೀಣ ಜನರಿಗೆ ಮತ್ತು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬದು ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗಿದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಜಗದೇವರೆಡ್ಡಿ ಪಾಟೀಲ್‌ ಹೇಳಿದರು.

Advertisement

ತಾಲೂಕಿನ ಸಾತನೂರ ಗ್ರಾಪಂ ವ್ಯಾಪ್ತಿಯ ಹೊಸ್ಸುರ ಗ್ರಾಮದಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್‌ -19 ನಂತಹ ವಿಷಮ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಯೋಜನೆಗಳು ರೂಪಿಸಲಾಗಿದೆ. ಅಭಿವೃದ್ಧಿಯ ಜೊತೆಯಲ್ಲಿ ಕಾರ್ಮಿಕರಿಗೆ ಕೂಲಿ ಹಣ ಕೂಡ ನರೇಗಾ ಯೋಜನೆಯಡಿ ಪಾವತಿಸಲಾಗುತ್ತಿದೆ. ಇಂದಿನ ದಿನಗಳಲ್ಲಿ ಅತ್ಯಂತ ಉಪಯುಕ್ತ ಯೋಜನೆ ಇದಾಗಿದ್ದು, ಈ ಯೋಜನೆ ಸೌಲಭ್ಯವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನಿತಾ ಕೆ. ಪೂಜಾರಿ ಮಾತನಾಡಿದರು. ಇದೇ ವೇಳೆ ಕಾಮಗಾರಿಯಲ್ಲಿ ತೊಡಗಿದ ಕೂಲಿಕಾರರಿಗೆ ಮಾಸ್ಕ್, ಸ್ಯಾನಿಟೈಸರ್‌ ಮತ್ತು ಸಾಬೂನು ನೀಡಲಾಯಿತು. ಗ್ರಾಪಂ ಅಧ್ಯಕ್ಷೆ ನಾಗಮ್ಮ ಕರದಾಳ, ತಾಪಂ ಮ್ಯಾನೇಜರ್‌ ಅಮೃತ ಕ್ಷೀರಸಾಗರ್‌, ಪಿಡಿಒ ಸೂರ್ಯಕಾಂತ, ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next