Advertisement

ಅಕ್ರಮ ಮರಳು ವಶಕ್ಕೆ ಸೂಚನೆ

01:15 PM Jun 25, 2020 | Naveen |

ಚಿತ್ತಾಪುರ: ತಾಲೂಕಿನ ಕಾಟಮದೇವರ ಹಳ್ಳಿ ಗ್ರಾಮದ ಕಾಗಿಣಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಸ್ಥಳಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ, ತಹಶೀಲ್ದಾರ್‌ ಉಮಾಕಾಂತ ಹಳ್ಳೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Advertisement

ನಂತರ ಮಾತನಾಡಿದ ಅವರು, ನಾನು ಪ್ರತಿಯೊಂದು ಸಭೆಯಲ್ಲಿ ಅಕ್ರಮ ಮರಳುಗಾರಿಕೆ ನಡಸುವವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ ನೀವು ಏನು ಮಾಡುತ್ತಿದ್ದಿರಿ ಎಂದು ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು. ನನ್ನ ಮತಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆ ನಡೆಯಲು ಬಿಡುವುದಿಲ್ಲ. ಅಕ್ರಮ ಚಟುವಟಿಕೆ ಕಂಡು ಬಂದರೆ ಅಧಿಕಾರಿಗಳ ಮೇಲೆಯೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್‌ ಉಮಾಕಾಂತ ಹಳ್ಳೆ, ಡಿವೈಎಸ್ಪಿ ವೆಂಕಣ್ಣಗೌಡ ಆರ್‌. ಪಾಟೀಲ, ಕಾಳಗಿ ಸಿಪಿಐ ರಾಠೊಡ, ವಿರೇಶ, ಶಿವಕುಮಾರ, ರಮೇಶ ಮರಗೋಳ, ಶಿವಕುಮಾರ ಮಾಡಬೂಳ, ಮಾಡಬೂಳ ಪೊಲೀಸ್‌, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next