Advertisement

ಚಿತ್ತೂರು: ಗ್ರಾಮಸ್ಪಂದನ ಬಿಜೆಪಿ ಕಾರ್ಯಕರ್ತರ ಸಭೆ

07:20 AM Aug 07, 2017 | Team Udayavani |

ಕುಂದಾಪುರ : ಚಿತ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಪಂದನ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮ ಆ. 4ರಂದು ಜರಗಿತು.

Advertisement

ಸಭೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ, ಬೈಂದೂರು ಕ್ಷೇತ್ರ ಅಧ್ಯಕ್ಷ‌ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಕಾರ್ಯದರ್ಶಿ ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್‌, ದೀಪಕ್‌ ಕುಮಾರ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷ ರಾಮಚಂದ್ರ ಮಂಜ, ಉಪಾಧ್ಯಕ್ಷ ಚಂದ್ರಯ್ಯ ಆಚಾರ್‌ ಕಳಿ, ತಾಲೂಕು ಪಂಚಾಯತ್‌ ಸದಸ್ಯರಾದ ಕರಣ್‌ ಕುಮಾರ ಪೂಜಾರಿ, ಉಮೇಶ ಶೆಟ್ಟಿ ಕಲ್ಗದ್ದೆ, ಇಂದಿರ ಶೆಟ್ಟಿ ಪಕ್ಷದ ಪ್ರಮುಖರಾದ ಅತುಲ್‌ ಕುಮಾರ ಶೆಟ್ಟಿ, ಪ್ರಕಾಶ ಪೂಜಾರಿ ಜೆಡ್ಡು, ಮಂಜುನಾಥ ದೇವಾಡಿಗ, ಶಿವರಾಜ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷ ರವಿರಾಜ್‌ ಶೆಟ್ಟಿ, ಗ್ರಾಮ ಪಂಚಾಯತ್‌   ಸದಸ್ಯರಾದ ಪ್ರದೀಪ ಶೆಟ್ಟಿ ಮಕ್ಕಿಮನೆ, ಚಂದ್ರ ಶೆಟ್ಟಿ ಕೂಳೂರು, ಸುರೇಶ ಪೂಜಾರಿ, ಅನಿಲ್‌ ಶೆಟ್ಟಿ, ರಾಜೇಶ ಶೆಟ್ಟಿ ಮತ್ತಿತರ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತ ಯೋಧರಾದ ಅಶೋಕ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಮೋಹನದಾಸ ಶೆಟ್ಟಿ, ಹಾಗೂ ಹಿರಿಯ ಕಾರ್ಯಕರ್ತ ಜಯಕರ ಶೆಟ್ಟಿ  ಅವರನ್ನು ಸಮ್ಮಾನಿಸಲಾಯಿತು. 

ಅನಾರೋಗ್ಯ ದಿಂದ ಬಳಲುತ್ತಿರುವ ಕಂಚಿನ ಕೊಡ್ಲು ನಿವಾಸಿ ಸಂದೀಪ ಪೂಜಾರಿ ಅವರ ತಂದೆಗೆ ಚಿತ್ತೂರು ಗ್ರಾಮ ಸಮಿತಿ ವತಿಯಿಂದ ಧನಸಹಾಯ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next