Advertisement

ಚಿತ್ತೂರು ಭೀಕರ ಅಪಘಾತ: ಇತ್ತೀಚೆಗಷ್ಟೇ ಶಿವಾಜಿನಗರ ಠಾಣೆಗೆ ವರ್ಗವಾಗಿದ್ದ ಪಿಎಸ್ ಐ ಅವಿನಾಶ್!

11:42 AM Jul 24, 2022 | Team Udayavani |

ಬೀದರ್: ಆಂಧ್ರ ಪ್ರದೇಶದ ಕೊತ್ತಕೊತ್ತ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ ಮೂಲದ ಬೆಂಗಳೂರು ಶಿವಾಜಿ ನಗರ ಪೊಲೀಸ್ ಠಾಣೆಯ ಪಿಎಸ್ಐ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ.

Advertisement

ಬಸವಕಲ್ಯಾಣ ತಾಲೂಕಿನ ರೋಳಾ ವಾಡಿಯ ಅವಿನಾಶ ಯಾದವ (29 ವ) ಮೃತಪಟ್ಟ ಪಿಎಸ್ಐ. 2017 ರ ಪಿಎಸ್ಐ ಬ್ಯಾಚ್ ನ ಅವಿನಾಶ ಯುನಿವರ್ಸಿಟಿ ಮತ್ತು ಪಿಣ್ಯ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿ ಇತ್ತೀಚಿಗಷ್ಟೇ ಶಿವಾಜಿನಗರ ಠಾಣೆಗೆ ವರ್ಗವಾಗಿದ್ದರು.

ಗಾಂಜಾ ಗ್ಯಾಂಗ್ ಹಿಡಿಯಲು ಎಂಟು ಮಂದಿ ಸಿಬ್ಬಂದಿಗಳು ಕಾರಿನಲ್ಲಿ ಎರಡು ತಂಡಗಳಾಗಿ ಬೆಂಗಳೂರಿನಿಂದ ಆಂಧ್ರದ ಕಡೆಗೆ ಹೋಗುವಾಗ ಕೊತ್ತಕೊತ್ತ ಗ್ರಾಮದ ಬಳಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಒಂದು ಕಾರು ಅಪಘಾತವಾಗಿದೆ ಎನ್ನಲಾಗಿದ್ದು, ಕಾರಿನಲ್ಲಿದ್ದ ಪಿಎಸ್ಐ ಅವಿನಾಶ ಸೇರಿ ಮೂವರು ಜೀವ ಕಳೆದುಕೊಂಡಿದ್ದಾರೆ.

ಅವಿನಾಶ್ ಅವರ ತಂದೆ ಕಾಶಿನಾಥ ಯಾದವ ಸಹ ಪಿಎಸ್ಐ ಆಗಿ‌ ಕಳೆದ 31ಕ್ಕೆ ನಿವೃತ್ತಿ ಹೊಂದಿದ್ದರು. ಅವಿನಾಶ ಸಾವು ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದ್ದು, ಆಕ್ರಂದನ ಹೆಚ್ಚಿದೆ. ಗ್ರಾಮದಲ್ಲಿ ನಿರವ ಮೌನ ಆವರಿಸಿದೆ. ಮೃತರ ಅಂತ್ಯಕ್ರಿಯೆ ಸ್ವ ಗ್ರಾಮ ಬಸವಕಲ್ಯಾಣ ತಾಲೂಕಿನ ರೋಳಾ ವಾಡಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next