Advertisement

ಹೆಲಿಕಾಪ್ಟರ್ ದುರಂತ: ಸಾವಿನ ಸಂಖ್ಯೆ 13ಕ್ಕೇರಿಕೆ; DNA ಪರೀಕ್ಷೆ ಮೂಲಕ ದೇಹಗಳ ಗುರುತು ಪತ್ತೆ

05:09 PM Dec 08, 2021 | Team Udayavani |

ಚೆನ್ನೈ: ತಮಿಳುನಾಡಿನ ಕೂನುರು ಸಮೀಪ ಪತನಕ್ಕೀಡಾದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿದೆ. ದೇಶದ ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಬಿಪಿನ್ ರಾವತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.

Advertisement

ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ 12 ಮಂದಿ ಸೇನಾ ಅಧಿಕಾರಿಗಳು ಭಾರತೀಯ ವಾಯುಸೇನೆಯ MI-17 V5 ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಅವರು ವೆಲ್ಲಿಂಗ್ಟನ್ ನ ಸೇನಾ ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಇದನ್ನೂ ಓದಿ:2015 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಪಾರಾಗಿದ್ದ ಬಿಪಿನ್ ರಾವತ್

ತಮಿಳುನಾಡಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಭಾಗಿಯಾಗಿದ್ದ 14 ಮಂದಿಯಲ್ಲಿ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಡಿಎನ್‌ಎ ಪರೀಕ್ಷೆಯ ಮೂಲಕ ಮೃತದೇಹಗಳ ಗುರುತು ಪತ್ತೆ ಮಾಡಬೇಕಾಗಿದೆ ಎಂದು ಎಎನ್ ಐ ಸುದ್ದಿ ಮಾಡಿದೆ.

Advertisement

ಅಪಘಾತದ ಕಾರಣ ತಿಳಿಯಲು ತನಿಖೆಗೆ ಆದೇಶ ನೀಡುರುವುದಾಗಿ ಭಾರತೀಯ ವಾಯುಸೇನೆ ಟ್ವಿಟ್ಟರ್ ನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next