Advertisement

Mangaluru ಸಿದ್ದರಾಮಯ್ಯರಿಗೆ ಕ್ರೈಸ್ತರಿಂದ ಕ್ರಿಸ್ಮಸ್‌ ಶುಭಾಶಯ

12:01 AM Dec 17, 2023 | Team Udayavani |

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ ಅವರು ಗೃಹ ಕಚೇರಿಯಲ್ಲಿ ಭೇಟಿ ಮಾಡಿ, ಕ್ರಿಸ್ಮಸ್‌ ಹಬ್ಬದ ತಿಂಡಿತಿನಿಸು (ಕುಸ್ವಾರ್‌) ಮತ್ತು ಕೇಕ್‌ಗಳನ್ನು ನೀಡಿ ಶುಭಾಶಯ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕ್ರೈಸ್ತ ಸಮುದಾಯದ ಅಭಿವೃದ್ಧಿ ಬಗ್ಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅವರ ಬೇಡಿಕೆ ಬಗ್ಗೆ ಸ್ಪಂದಿಸುವುದಾಗಿ ತಿಳಿಸಿದರು.

Advertisement

ಕರ್ನಾಟಕ ಕ್ರೈಸ್ತ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿದ ಮುಖ್ಯಮಂತ್ರಿಯವರಿಗೆ ಅಭಿನಂದಿಸಿ, ಮುಂದಿನ ಬಜೆಟ್‌ನಲ್ಲಿ ಕನಿಷ್ಠ 500 ಕೋಟಿ ರೂ.ಗಳನ್ನು ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ವಿನಂತಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಕಳ ಅತ್ತೂರು ಬಸಿಲಿಕ ಚರ್ಚಿನ ವಂ| ಅಲ್ಬನ್‌ ಡಿ’ಸೋಜಾ, ಉಪಾಧ್ಯಕ್ಷ ಸಂತೋಷ್‌ ಡಿ’ಸಿಲ್ವ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next