Advertisement

ರೈತ ಹೋರಾಟವು ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರವಲ್ಲ: ಚುಕ್ಕಿ ನಂಜುಂಡಸ್ವಾಮಿ

03:30 PM Mar 13, 2021 | Team Udayavani |

ಬೆಳಗಾವಿ: ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ನಡೆಯುತ್ತಿರುವ ಹೋರಾಟ ರೈತ ಕುಲದ ಅಸ್ತಿತ್ವ ಉಳಿಸಿಕೊಳ್ಳುವ ಉದ್ದೇಶದ್ದೇ ಹೊರತು, ಸರ್ಕಾರದ ವಿರುದ್ಧದ ಅಥವಾ ಕಾಂಗ್ರೆಸ್‌ ಪರ ಅಲ್ಲ ಎಂದು ರೈತ ಸಂಘದ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಸ್ಪಷ್ಟಪಡಿಸಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ರೈತ ಸಂಘದ ಹೋರಾಟವಲ್ಲ. ಇಡೀ ಸಮಾಜದ ಚಳವಳಿಯಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಎಲ್ಲರಿಗೂ ತೊಂದರೆಯಾಗಿಲ್ಲವೇ?ಎಂದು ಪ್ರಶ್ನಿಸಿದರು.

ಉತ್ತರ ಭಾರತದಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಸರ್ಕಾರ ಎಷ್ಟರ ಮಟ್ಟಿಗೆ ಸ್ಪಂದಿಸಿದೆ ಎಂಬುದು ಜನರಿಗೆ ಗೊತ್ತಾಗಿದೆ. ಕೊರೆಯುವ ಚಳಿಯಲ್ಲೂ ದೆಹಲಿಯ ಗಡಿಗಳಲ್ಲಿ ಅವರು ಚಳವಳಿ ಮಾಡುತ್ತಿದ್ದಾರೆ. 230 ಮಂದಿ ಅಲ್ಲಿನ ವಾತಾವರಣ ತಾಳಲಾರದೆ ಪ್ರಾಣ ತ್ಯಾಗ ಮಾಡಿದ್ದಾರೆ. ಬೇರೆ ಬೇರೆ ಸ್ವರೂಪದಲ್ಲಿ ಹೋರಾಟ ಮುಂದುವರಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದರು.

ಇದನ್ನೂ ಓದಿ:ಆಂತರಿಕ ಕಲಹ ಮರೆಮಾಚಲು ಕಾಂಗ್ರೆಸ್ ನಿಂದ ಯಾತ್ರೆ ನಾಟಕ: ಜಗದೀಶ್ ಶೆಟ್ಟರ್

ಕೃಷಿಗೆ ಸಂಬಂಧಿಸಿದ ಕಾಯ್ದೆಗಳಿಗೆ ತಿದ್ದುಪಡಿ ತಂದಿರುವದು ರೈತರಿಗೆ ನೇರ ಹೊಡೆತ ಬಿದ್ದಿದೆ. ರೈತರೊಂದಿಗೆ ಕಾರ್ಮಿಕ ಸೇರಿದಂತೆ ವಿವಿಧ ಸಂಘಟನೆಗಳು ದನಿ ಎತ್ತಿದರೂ ಸರ್ಕಾರ ಸ್ಪಂದಿಸಿಲ್ಲ. ಚಳವಳಿ ನಡೆಸುತ್ತಿರುವವರ ರೈತರಲ್ಲ, ಅವರಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬಿತ್ಯಾದಿ ಮಾತುಗಳ ಮೂಲಕ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

Advertisement

ದೇಶದ ವಿವಿಧೆಡೆ ನಡೆಯುತ್ತಿರುವ ಕಿಸಾನ್ ಮಹಾಪಂಚಾಯತ್‌ಗಳಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಿರುವುದು ಚಳವಳಿಯ ಗಟ್ಟಿತನವನ್ನು ತೋರಿಸುತ್ತಿದೆ ಎಂದರು.

ಈಗ ರೈತ ಸಂಘ ಸೇರಿದಂತೆ ಹಲವು ಸಂಘಗಳು ಸೇರಿ ದಕ್ಷಿಣ ಭಾರತಕ್ಕೂ ಚಳವಳಿಯನ್ನು ವಿಸ್ತರಿಸುತ್ತಿದ್ದೇವೆ. ಮೊದಲಿಗೆ ರಾಜ್ಯದ ಮೂರು ಕಡೆಗಳಲ್ಲಿ ರೈತರ ಮಹಾಪಂಚಾಯತ್‌ಗಳನ್ನು ನಡೆಸಲಾಗುತ್ತಿದೆ. ರೈತರ ಉಳಿವಿಗಾಗಿ ಈ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಉಪ್ಪಿನಂಗಡಿ:ಮಗುಚಿಬಿದ್ದ ಡೀಸೆಲ್ ಟ್ಯಾಂಕರ್; ಬಿಟ್ಟಿ ಡೀಸೆಲ್ ಗೆ ನೂಕುನುಗ್ಗಲು,ಲಾಠಿ ಪ್ರಹಾರ

ಸಂಘದ ಉತ್ತರ ಕರ್ನಾಟಕದ ಗೌರವ ಅಧ್ಯಕ್ಷ ಶಶಿಕಾಂತ ಪಡಿಸಲಗಿ ಮಾತನಾಡಿ ಬೆಳಗಾವಿ ಜಿಲ್ಲಾಡಳಿತ ಯಾವುದೇ ಸ್ಥಳ ನೀಡುತ್ತಿಲ್ಲ. ಚನ್ನಮ್ಮ ವೃತ್ತದಲ್ಲೂ ಅವಕಾಶ ಕೊಡದಿದ್ದರೆ ಜೈಲ್ ಭರೋ ಚಳವಳಿ ಆಗಬಹುದು. ರೈತ ಸಂಘದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next