Advertisement

ಜೂ. 13ರಿಂದ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ

09:58 AM Jun 07, 2020 | sudhir |

ಮಂಗಳೂರು/ಉಡುಪಿ: ಕೋವಿಡ್ ಲಾಕ್‌ಡೌನ್‌ ಪ್ರಯುಕ್ತ ಚರ್ಚ್‌ಗಳಲ್ಲಿ ತಾತ್ಕಾಲಿಕವಾಗಿ ರದ್ದುಪಡಿಸಿದ್ದ ಬಲಿಪೂಜೆ ಮತ್ತು ಇತರ ಸಾಮೂಹಿಕ ಪ್ರಾರ್ಥನೆಗಳು ಮಂಗಳೂರು ಧರ್ಮಪ್ರಾಂತದಲ್ಲಿ ಜೂ. 13ರಿಂದ ಪುನರಾರಂಭಗೊಳ್ಳಲಿವೆ. ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್‌ಗಳಲ್ಲಿ ಪ್ರಾರ್ಥನೆಗಳನ್ನು ಜೂ. 13 ರಿಂದ ಆರಂಭಿಸಲಾಗುವುದು ಎಂದು ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

ಉಡುಪಿ: ಜೂ. 8ರಂದು ನಿರ್ಧಾರ
ಬೆಂಗಳೂರು ಪ್ರಾದೇಶಿಕ ಕೇಂದ್ರದಿಂದ ಜೂ. 13ರಿಂದ ಪ್ರಾರ್ಥನೆಗಳನ್ನು ನಡೆಸಬಹುದು ಎಂಬ ಸೂಚನೆ ಬಂದರೂ ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿತಿ ಭಿನ್ನವಾಗಿರುವುದರಿಂದ ಜೂ. 8ರಂದು ಬಿಷಪ್‌ ರೈ| ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಅಂತಿಮ ನಿರ್ಧಾರವನ್ನು ತಳೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ
ಮಂಗಳೂರು/ಉಡುಪಿ: ಮಸೀದಿಗಳನ್ನು ಜೂ. 8ರಿಂದ ತೆರೆಯಲು ಸರಕಾರ ಅವಕಾಶ ಮಾಡಿಕೊಟ್ಟರೂ ಮುಂದೆ ಮಸೀದಿಗೆ ಸಂಬಂಧಿಸಿದ ನಿರ್ದಿಷ್ಟ ಮಾರ್ಗಸೂಚಿಗ ಳನ್ನು ಪ್ರಕಟಿಸಿದ ಬಳಿಕವೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.

ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್‌ ಕಮಿಟಿಯ ಅಧ್ಯಕ್ಷ ಅಲ್‌ಹಾಜ್‌ ಕೆ.ಎಸ್‌. ಮುಹಮದ್‌ ಮಸೂದ್‌ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್‌ ಮಲ್ಪೆ ಅವರು ಈ ವಿಚಾರವನ್ನು ಉದಯವಾಣಿಗೆ ತಿಳಿಸಿದ್ದಾರೆ.
ಝೀನತ್‌ ಭಕ್ಷ್ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ: ಮಂಗಳೂರು ಬಂದರ್‌ನ ಝೀನತ್‌ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಜಮಾಅತ್‌ ಖಾನಾದಲ್ಲಿ ಜೂ. 8ರಿಂದ ನಮಾಝ್ ಪ್ರಾಯೋಗಿಕವಾಗಿ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಅಲ್‌ಹಾಜ್‌ ವೈ. ಅಬ್ದುಲ್ಲ ಕುಂಞಿ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next