Advertisement

ಛತ್ತೀಸ್‍ಗಡ: ಚರ್ಚ್‌ ಧ್ವಂಸ,ಪೊಲೀಸರ ಮೇಲೆ ಹಲ್ಲೆ ಪ್ರಕರಣ; 6 ಮಂದಿ ಸೆರೆ

09:05 PM Jan 07, 2023 | Team Udayavani |

ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಚರ್ಚ್‌ ಧ್ವಂಸಪ್ರಕರಣ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ 6 ಮಂದಿಯನ್ನು ಬಂಧಿಸಲಾಗಿದೆ. ಇದರಿಂದಾಗಿ ಘಟನೆಗೆ ಸಂಬಂಧಿಸಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ನಾರಾಯಣಪುರದಲ್ಲಿ ಖಾಸಗಿ ಶಾಲೆಯೊಂದರ ಆವರಣದಲ್ಲಿದ್ದ ಚರ್ಚ್‌ನಲ್ಲಿ ಮತಾಂತರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಗುಂಪೊಂದು ಪ್ರತಿಭಟನೆ ನಡೆಸಿತ್ತು.

ಈ ಸಂದರ್ಭದಲ್ಲಿ ಕೆಲವರು ಚರ್ಚ್‌ ಧ್ವಂಸಕ್ಕೆ ಮುಂದಾಗಿದ್ದಲ್ಲದೆ, ಗುಂಪು ಚದುರಿಸಲು ಬಂದ ಪೊಲೀಸ್‌ ವರಿಷ್ಠಾಧಿಕಾರಿ ಸದಾನಂದ್‌ ಕುಮಾರ್‌ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next