Advertisement

ಛತ್ತೀಸ್‍ಗಡ: ಚರ್ಚ್‌ ಧ್ವಂಸ,ಪೊಲೀಸರ ಮೇಲೆ ಹಲ್ಲೆ ಪ್ರಕರಣ; 6 ಮಂದಿ ಸೆರೆ

09:05 PM Jan 07, 2023 | Team Udayavani |

ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಚರ್ಚ್‌ ಧ್ವಂಸಪ್ರಕರಣ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ 6 ಮಂದಿಯನ್ನು ಬಂಧಿಸಲಾಗಿದೆ. ಇದರಿಂದಾಗಿ ಘಟನೆಗೆ ಸಂಬಂಧಿಸಿದಂತೆ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ನಾರಾಯಣಪುರದಲ್ಲಿ ಖಾಸಗಿ ಶಾಲೆಯೊಂದರ ಆವರಣದಲ್ಲಿದ್ದ ಚರ್ಚ್‌ನಲ್ಲಿ ಮತಾಂತರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಗುಂಪೊಂದು ಪ್ರತಿಭಟನೆ ನಡೆಸಿತ್ತು.

ಈ ಸಂದರ್ಭದಲ್ಲಿ ಕೆಲವರು ಚರ್ಚ್‌ ಧ್ವಂಸಕ್ಕೆ ಮುಂದಾಗಿದ್ದಲ್ಲದೆ, ಗುಂಪು ಚದುರಿಸಲು ಬಂದ ಪೊಲೀಸ್‌ ವರಿಷ್ಠಾಧಿಕಾರಿ ಸದಾನಂದ್‌ ಕುಮಾರ್‌ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next