Advertisement

Ramesh Jarkiholi ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಾಳಿ

08:59 PM Feb 06, 2024 | Team Udayavani |

ಬೆಳಗಾವಿ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸಕ್ಕರೆ ಕಾರ್ಖಾನೆ ಮೇಲೆ ಬೆಂಗಳೂರಿನಿಂದ ಆಗಮಿಸಿದ್ದ ಸಿಐಡಿ ಅ ಧಿಕಾರಿಗಳ ತಂಡ ದಾಳಿ ನಡೆದಿದ್ದು, ಹಲವು ದಾಖಲೆಗಳ ಪರಿಶೀಲನೆ ನಡೆಸಿದೆ. ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್‌ ಬ್ಯಾಂಕ್‌ನಲ್ಲಿ 439 ಕೋಟಿ ರೂ. ಸಾಲ ಪಡೆಯಲಾಗಿತ್ತು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಜ.5ರಂದು ಅಪೆಕ್ಸ್‌ ಬ್ಯಾಂಕ್‌ ಮ್ಯಾನೇಜರ್‌ ರಾಜಣ್ಣ ಮುತ್ತಶೆಟ್ಟಿ ಎಂಬುವರಿಂದ ಸೆಕ್ಷನ್‌ 406, 420 ಅನ್ವಯ ದೂರು ದಾಖಲಿಸಲಾಗಿತ್ತು. ನಂತರ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಅದರಂತೆ ಮಂಗಳವಾರ ಸಿಐಡಿ ಅಧಿಕಾರಿಗಳ ತಂಡ ಕಾರ್ಖಾನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದೆ.

ಈಗ ಸಕ್ಕರೆ ಕಾರ್ಖಾನೆಯು ರಮೇಶ ಜಾರಕಿಹೊಳಿ ಪುತ್ರ ಸಂತೋಷ ಜಾರಕಿಹೊಳಿ ಮಾಲೀಕತ್ವದಲ್ಲಿದೆ. ದಾಳಿ ವೇಳೆ ಸಿಕ್ಕ ದಾಖಲೆಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

 

Advertisement

Udayavani is now on Telegram. Click here to join our channel and stay updated with the latest news.

Next