Advertisement

ಚುನಾವಣಾ ಪ್ರಚಾರಕ್ಕೆ ರಂಗೇರಿಸುತ್ತಿರುವ ಸಿನಿ ತಾರೆಯರು

07:15 AM May 05, 2018 | |

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು, ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ರಾಜಕೀಯ ನೇತಾರರು, ಸಿನಿ ತಾರೆಯರನ್ನು ಬಳಸಿಕೊಳ್ಳುತ್ತಿದ್ದಾರೆ. ಶುಕ್ರವಾರ ರಾಜ್ಯದ ವಿವಿಧೆಡೆ ನಡೆದ ರೋಡ್‌ ಶೋ, ಚುನಾವಣಾ ಪ್ರಚಾರ ಸಭೆಗಳಲ್ಲಿ ಸಿನಿ ತಾರೆಯರ ಉಪಸ್ಥಿತಿ ಕಂಡು ಬಂತು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಚಾಮುಂಡೇಶ್ವರಿ ಸೇರಿ ಮೈಸೂರು ನಗರದ ಹಲವು ಕ್ಷೇತ್ರಗಳಲ್ಲಿ ಬಾಲಿವುಡ್‌ ಹಾಗೂ ಸ್ಯಾಂಡಲ್‌ವುಡ್‌ನ‌ ನಟ-ನಟಿಯರು ಶುಕ್ರವಾರ ಅಬ್ಬರದ ಪ್ರಚಾರ ನಡೆಸಿದರು. ನಗರದ ಚಾಮುಂಡೇಶ್ವರಿ, ನರಸಿಂಹರಾಜ ಹಾಗೂ ಚಾಮರಾಜ ಕ್ಷೇತ್ರದ ಹಲವು ಕಡೆಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ ಬಾಲಿವುಡ್‌ ನಟ ರಾಜ್‌ ಬಬ್ಬರ್‌, ನಟಿ ರಿಷಿಕಾ ಸಿಂಗ್‌, ನಿರ್ದೇಶಕ ರಾಜೇಂದ್ರ ಸಿಂಗ್‌ಬಾಬು, ಮದನ್‌  ಪಟೇಲ್‌ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಮತಯಾಚಿಸಿದರು.

ಪ್ರಚಾರಕ್ಕೆ ಚಾಲೆಂಜಿಂಗ್‌ ಸ್ಟಾರ್‌?
ಈ ಮಧ್ಯೆ, ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದ ಹಲವು ಕಡೆಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಲಿರುವ ದರ್ಶನ್‌ ತೂಗುದೀಪ್‌, ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಮತಯಾಚಿಸಲಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next