Advertisement

ಹೃದಯಾಘಾತದಿಂದ ಪೌರ ಕಾರ್ಮಿಕ ಸಾವು.

11:18 AM Nov 04, 2021 | Team Udayavani |

ಹುಣಸೂರು: ಹುಣಸೂರು ನಗರಸಭೆಯಲ್ಲಿ ನೇರಪಾವತಿ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿದ್ದ ಮುರುಗೇಶ್ ( 42) ಸಾವು.
ಗುರುವಾರ ಬೆಳಗ್ಗೆ 5 ಗಂಟೆ ವೇಳೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದ ಮುರುಗೇಶ್ ಗೆ  ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಹುಣಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತಾದರೂ ಫಲಕಾರಿಯಾಗಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಮೃತರಾಗಿದ್ದಾರೆ.

Advertisement

ಇದನ್ನೂ ಓದಿ:- ಬೊಕ್ಕಸಕ್ಕೆ ಕೊರತೆಯಾದರೂ ಪೆಟ್ರೋಲ್-ಡೀಸಲ್ ತೆರಿಗೆ ಇಳಿಕೆ: ಸಿಎಂ ಬೊಮ್ಮಾಯಿ
ಯಾವುದೇ ಸೇವಾ ಭದ್ರತೆ ಇಲ್ಲದೆ ನಗರಸಭೆಗಳಲ್ಲಿ ಪೌರ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ಮುರುಗೇಶ್ ಕುಡುಂಬಕ್ಕೆ 20 ಲಕ್ಷರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿರುವ ಪೌರ ಕಾರ್ಮಿಕರು ಆತನ ಪತ್ನಿಗೆ ಕೆಲಸ ಕೊಡಬೇಕೆಂದು ಒತ್ತಾಯಿಸುತ್ತಿದ್ದಾರೆ.
ಆಡಳಿತ ವರ್ಗಕ್ಕೆ ತಮ್ಮ ಕಷ್ಟ ಮನವರಿಕೆ ಮಾಡಲು ಕೆಲಸ ಸ್ಥಗಿತ ಗೊಳಿಸಿರುವ ಪೌರ ಕಾರ್ಮಿಕರು ನಗರಸಭೆ ಎದುರು ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next