Advertisement

ಸಿಜೆಐ ಪ್ರಕರಣ: ಹಿಂದೆ ಸರಿದ ಸಂತ್ರಸ್ತೆ

02:20 AM May 01, 2019 | Sriram |

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿರುವ ಸುಪ್ರೀಂ ಕೋರ್ಟ್‌ನ ಮಾಜಿ ಉದ್ಯೋಗಿ ಇನ್ನು ಮುಂದೆ ನ್ಯಾಯಾಲಯದ ಆಂತರಿಕ ತನಿಖಾ ಸಮಿತಿ ಎದುರು ಹಾಜರಾಗುವುದಿಲ್ಲ ಎಂದು ಘೋಷಿಸಿದ್ದಾರೆ.

Advertisement

ಮಂಗಳವಾರ ತಮ್ಮ ನಿರ್ಧಾರವನ್ನು ತಿಳಿಸಿದ ಅವರು, ‘ನನಗೆ ಸುಪ್ರೀಂ ಕೋರ್ಟ್‌ನ ಆಂತರಿಕ ತನಿಖಾ ಸಮಿತಿಯಿಂದ ಯಾವುದೇ ನ್ಯಾಯ ಸಿಗುತ್ತದೆಂಬ ನಂಬಿಕೆಯಿಲ್ಲ. ಅಲ್ಲದೆ, ವಿಚಾರಣೆ ವೇಳೆ ನಾನೊಬ್ಬಳೇ ಸಮಿತಿ ಮುಂದೆ ಹಾಜರಾಗಬೇಕಾಗುತ್ತದೆ. ನನ್ನ ಪರ ವಕೀಲರಿಗೂ ಒಳಗೆ ಬರಲು ಅವಕಾಶ ಕಲ್ಪಿಸುತ್ತಿಲ್ಲ. ವಿಚಾರಣೆಯ ಆಡಿಯೋ ಅಥವಾ ವೀಡಿಯೋ ರೆಕಾರ್ಡಿಂಗ್‌ ಕೂಡ ಮಾಡಲಾಗುತ್ತಿಲ್ಲ. ನಾನು ವಿಚಾರಣೆಯಿಂದಲೇ ಹಿಂದೆ ಸರಿಯುತ್ತಿದ್ದೇನೆ’ ಎಂದು ಹೇಳಿದ್ದಾರೆ. ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬೆನ್ನಲ್ಲೇ ನ್ಯಾ| ಎಸ್‌.ಎ. ಬೋಬ್ಡೆ ನೇತೃತ್ವದಲ್ಲಿ ಮೂವರು ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯೇ ವಿಚಾರಣೆ ನಡೆಸುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next