Advertisement

ಸಿಜೆಐಗೆ ಪತ್ರ ಬರೆದ ಬಳಿಕ ಬಸ್‌ ಬಂತು!

11:28 PM Nov 04, 2021 | Team Udayavani |

ಹೈದರಾಬಾದ್‌: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚಿಡೇಡು ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರಿಗೇ ಪತ್ರ ಬರೆದು ತನ್ನೂರಿಗೆ ಬಸ್‌ ಸಂಚಾರ ಪುನರಾರಂಭಕ್ಕೆ ಕಾರಣಳಾಗಿದ್ದಾಳೆ.

Advertisement

ಕೊರೊನಾ ಸೋಂಕು ಹೆಚ್ಚಿದ್ದ ಸಮಯದಲ್ಲಿ ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆ ಗ್ರಾಮಕ್ಕೆ ಬರುತ್ತಿದ್ದ ಬಸ್‌ನ ಸಂಚಾರ ಸ್ಥಗಿತಗೊಳಿಸಿತ್ತು. ಸದ್ಯ ಪರಿಸ್ಥಿತಿ ಸಹಜತೆಗೆ ಬಂದಿದ್ದರೂ ಬಸ್‌ ವ್ಯವಸ್ಥೆ ಪುನರಾರಂಭವಾಗಿರಲಿಲ್ಲ. ಈ ನಡುವೆ ಶಾಲೆಗಳೂ ಪುನಾರಂಭವಾಗಿದ್ದರಿಂದ 8ನೇ ತರಗತಿ ವಿದ್ಯಾರ್ಥಿನಿ ಪಿ.ವೈಷ್ಣವಿ ಮತ್ತು ಆಕೆಯ ಸ್ನೇಹಿತರಿಗೆ ಸೂಕ್ತ ಸಮಯದಲ್ಲಿ ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ದಿನವೂ ಆಟೋ ರಿಕ್ಷಾದಲ್ಲಿಯೇ ಪ್ರಯಾಣಿಸಲು ಆರ್ಥಿಕವಾಗಿ ಸಾಧ್ಯವಿಲ್ಲ. ಹೀಗಾಗಿ, ಬಸ್‌ ಸಂಚಾರವನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರಿಗೆ ಪತ್ರ ಬರೆದಿದ್ದಳು.

ಅದನ್ನು ಗಂಭೀರವಾಗಿ ಪರಿಗಣಿಸಿದ್ದ ಮುಖ್ಯ ನ್ಯಾಯಮೂರ್ತಿಗಳು ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿ.ಸಿ.ಸಜ್ಜನರ್‌ ಅವರಿಗೆ ಪತ್ರ ಬರೆದಿದ್ದರು. ಎಚ್ಚೆತ್ತುಕೊಂಡು ಸಾರಿಗೆ ಸಂಸ್ಥೆ ಗ್ರಾಮಕ್ಕೆ ಬಸ್‌ ಶುರುವಾಗುವಂತೆ ಮಾಡಿದೆ. ಸೂಕ್ತ ಸಮಯದಲ್ಲಿ ಮಾಹಿತಿ ನೀಡಿದ್ದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಸಜ್ಜನರ್‌ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next