Advertisement

ಡಿವೈಎಫ್ಐ-ಆರೆಸ್ಸೆಸ್‌ ಕಾರ್ಯಕರ್ತರ ಘರ್ಷಣೆ: 19 ಮಂದಿಗೆ ಗಾಯ

08:10 AM Aug 16, 2017 | Team Udayavani |

ಕಾಸರಗೋಡು: ಡಿವೈಎಫ್ಐ ಮತ್ತು ಆರೆಸ್ಸೆಸ್‌ – ಬಿಜೆಪಿ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ 19 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೋಟಪಾರದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ರ್ಯಾಲಿಯಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದ ಡಿವೈಎಫ್ಐ ಕಾರ್ಯಕರ್ತರು ಮತ್ತು ಬಲಪಂಥೀಯ ಸಂಘಟನೆಗಳ ನಡುವೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮಾವುಂಗಾಲ್‌ನಲ್ಲಿ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಡಿವೈಎಫ್ ನ 8 ಮಂದಿ ಗಾಯಗೊಂಡಿದ್ದಾಗಿ ಸಿಪಿಎಂನ ಜಿಲ್ಲಾ ಕಾರ್ಯದರ್ಶಿ ಸತೀಶ್‌ ಚಂದ್ರನ್‌ ತಿಳಿಸಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕಣ್ಣೂರಿನ ಪೆರಿಯಾರಂ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿದೆ ಎಂದಿದ್ದಾರೆ. ಬಿಜೆಪಿ – ಆರೆಸ್ಸೆಸ್‌ನ 11 ಮಂದಿ ಗಾಯಗೊಂಡಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀಕಾಂತ್‌ ಅವರು ಹೇಳಿದ್ದಾರೆ. ಗಾಯಾಳುಗಳು ನೀಲೇಶ್ವರದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದಿದ್ದಾರೆ. ಘಟನೆಗೆ ಸಂಬಂಧಿಸಿ ಪೊಲೀಸರು ದೊಂಬಿ ಸಹಿತ ವಿವಿಧ ಸೆಕ್ಷನ್‌ಗಳಡಿ ಕೇಸು ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next