Advertisement

ತಂದೆ ಮಗನ ನಡುವೆ ಘರ್ಷಣೆ: ಗಂಭೀರ ಗಾಯಗೊಂಡ ತಂದೆ ಸಾವು

10:39 PM Aug 17, 2020 | Hari Prasad |

ಪುತ್ತೂರು: ತಂದೆ ಮತ್ತು ಮಗನ ನಡುವೆ ಕಾಳಗ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

Advertisement

ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ.

ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಘರ್ಷಣೆಯಲ್ಲಿ ಪುತ್ರ ಶಶಿಧರ್ ಅವರಿಗೂ ಗಾಯಗಳಾಗಿದ್ದು ಆತನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next