Advertisement

ಮೈಸೂರು: ರಸ್ತೆ ಕಾಮಗಾರಿ ವಿಚಾರದಲ್ಲಿ ಘರ್ಷಣೆ: ಇಬ್ಬರಿಗೆ ಗಾಯ

10:41 PM Jun 23, 2020 | Hari Prasad |

ಮೈಸೂರು: ರಸ್ತೆ ಕಾಮಗಾರಿ ವಿಚಾರದಲ್ಲಿ ಎರಡು ಬಣಗಳ ನಡುವೆ ಘರ್ಷಣೆ ಸಂಭವಿಸಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.

Advertisement

ಮೈಸೂರು ತಾಲೂಕಿನ ಆನಂದೂರು ಗ್ರಾಮ ಪಂಚಾಯಯತ್ ವ್ಯಾಪ್ತಿಯಲ್ಲಿ ಈ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಆನಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕಾಂಗ್ರೆಸ್ ನ ರಾಮೇ ಗೌಡ ಹಾಗೂ ಅದೇ ಗ್ರಾಮದ ನಿವಾಸಿ ಜೆಡಿಎಸ್ ನ ಚಂದ್ರಶೇಖರ್ ಅವರು ಗಾಯಗೊಂಡವರಾಗಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ರಾಮೇ ಗೌಡ ಅವರು ಈ ಭಾಗದಲ್ಲಿ ಸರಕಾರಿ ರಸ್ತೆ ಕಾಮಗಾರಿ ಮಾಡಿಸುತ್ತಿದ್ದರು. ಈ ಸಂದರ್ಭದಲ್ಲಿ ತನ್ನ ಜಮೀನಿನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದು ಆರೋಪಿಸಿ ಚಂದ್ರಶೇಖರ್ ಅವರು ತಗಾದೆ ತೆಗೆದಿದ್ದಾರೆ.

ಈ ಸಂದರ್ಭದಲ್ಲಿ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಒಂದು ಹಂತದಲ್ಲಿ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

Advertisement

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಇಲವಾಲ ಪೊಲೀಸರು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next