Advertisement

ನಾಗಮಂಗಲದಲ್ಲಿ ಮಾರಾಮಾರಿ ; ಹಲವರು ಆಸ್ಪತ್ರೆಗೆ ; 13 ಸೆರೆ

10:10 AM Jun 07, 2019 | Vishnu Das |

 

Advertisement

ನಾಗಮಂಗಲ: ಇಲ್ಲಿನ ಮುಳ್ಳುಕಟ್ಟಮ್ಮ ದೇಗುಲದಪೂಜೆ ವಿಚಾರಕ್ಕೆ ಸಂಬಂಧಿಸಿ 2 ಗುಂಪುಗಳ ನಡುವೆ ಗುರುವಾರ ಮಾರಾಮಾರಿ ನಡೆದಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಚೆಲುವರಾಯ ಸ್ವಾಮಿ ಮತ್ತು ಜೆಡಿಎಸ್‌ ಶಾಸಕ ಸುರೇಶ್‌ ಗೌಡ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.

ದೇಗುಲದ ಪೂಜೆ ವಿಚಾರದಲ್ಲಿ 2 ಕುಟುಂಬಗಳ ನಡುವೆ ವಿವಾದ ಉಂಟಾಗಿತ್ತು. ಬುಧವಾರ ಸಂಜೆ 13 ಮಂದಿ ಯುವಕರು ದೇವಸ್ಥಾನಕ್ಕೆ ಬಾಗಿಲು ಹಾಕಿ ದಾಂಧಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ನಾಗಮಂಗಲದಲ್ಲಿ ಉದ್ವಿಗ್ನ ವಾತಾವಾರಣ ನಿರ್ಮಾಣವಾಗಿದ್ದು , ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

Advertisement

ನಾಗಮಂಗಲ ಟೌನ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next