Advertisement

Kushtagi: ಬಿಲ್ ಕೊಡುವ ವಿಚಾರದಲ್ಲಿ ರೆಸ್ಟೋರೆಂಟ್ ಸಿಬ್ಬಂದಿಯೊಂದಿಗೆ ಯುವಕರ ಗಲಾಟೆ

10:45 AM Feb 13, 2024 | Team Udayavani |

ಕುಷ್ಟಗಿ: ಪಟ್ಟಣದ ಹೊರವಲಯದ ಕೊಪ್ಪಳ ರಸ್ತೆಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ವೊಂದರಲ್ಲಿ ಬಿಲ್ ಕೊಡುವ ವಿಚಾರಕ್ಕೆ ಗ್ರಾಹಕರ ಮಧ್ಯೆ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Advertisement

ಕೊರಡಕೇರಾ ಗ್ರಾಮದ ಯುವಕರು ಮದ್ಯ ಸೇವಿಸಿ ಬಿಲ್ ಕೊಡುವ ವಿಚಾರದಲ್ಲಿ ಕೌಂಟರ್ ಸಿಬ್ಬಂದಿಯೊಂದಿಗೆ ಕ್ಯಾತೆ ತೆಗೆದು ವಾಗ್ವದಕ್ಕಿಳಿದಿದ್ದು, ಇದು ಮಾತಿಗೆ ಮಾತು ಬೆಳೆದು ಕೌಂಟರ್ ಸಿಬ್ಬಂದಿಯ ಮೇಲೆ ಕೈ ಮಾಡಿದ್ದಾರೆ.

ರೆಸ್ಟೋರೆಂಟ್ ಸಿಬ್ಬಂದಿ ಕುಡಿದ ಅಮಲಿನಲ್ಲಿದ್ದ ಓರ್ವ ಯುವಕನಿಗೆ ಮುಖ- ಮೂತಿ ನೋಡದೇ ಸರಿಯಾಗಿ ಥಳಿಸಿದ್ದಾನೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ 112 ಸಿಬ್ಬಂದಿ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾನೆ.

ಥಳಿಸಿಕೊಂಡ ಯುವಕನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ಪ್ರಕರಣದ ಹಿನ್ನೆಲೆ ‌ಪೊಲೀಸರು ರೆಸ್ಟೋರೆಂಟ್ ಗಲಾಟೆಗೆ ಕಾರಣರಾದವರನ್ನು ಮಂಗಳವಾರ ಠಾಣೆಗೆ ಬರಲು ಸೂಚಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next