Advertisement

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

05:25 PM Oct 18, 2021 | Team Udayavani |

ಕೋಲಾರ: ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಆಸ್ಪತ್ರೆಗೆ ದಾಖಲಾಗುವ ಸಮಯದಲ್ಲಿಯೂ ಮತ್ತೇ  ಪರಸ್ಪರ ಹೊಡೆದಾಡಿಕೊಂಡ ಘಟನೆ ಕೋಲಾರ ಜಿಲ್ಲಾ ಎಸ್ ಎನ್ ಆರ್ ಆಸ್ಪತ್ರೆಯಲ್ಲಿ ನಡೆದಿದೆ.

Advertisement

ಜಿಲ್ಲಾಸ್ಪತ್ರೆ ತುರ್ತು ಚಿಕಿತ್ಸಾ ಘಟಕದಲ್ಲಿ ಪರಸ್ಪರ ಹೊಡೆದಾಡಿಕೊಂಡ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಮುಂಜಾನೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ ಜಗಳದಲ್ಲಿ ಹಲವರಿಗೆ ರಕ್ತ ಗಾಯಗಳಾಗಿದೆ.

ಅಪರಂಜಿ ನಾರಾಯಣಸ್ವಾಮಿ ಮತ್ತು ಗಂಗಾಧರ ಬಣಗಳ ಮಧ್ಯೆ ಜಗಳ ನಡೆದಿದೆ. ಇವರ ಪರವಾಗಿ ಅಮರ್ ಮತ್ತು ಬಾಲು ಗುಂಪಿನವರು ಹೊಡೆದಾಡಿ ಕೊಂಡಿದ್ದಾರೆ.

ಜಗಳದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡ ಐವರು ಕೋಲಾರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಬಂದಿದ್ದಾರೆ. ಆಸ್ಪತ್ರೆಗೆ ದಾಖಲಾಗಿ ದೂರು ನೀಡಲು ಬಂದ ವೇಳೆ ಆಸ್ಪತ್ರೆಯಲ್ಲಿಯೂ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ವಿಕೋಪಕ್ಕೆ ತೆರಳಿ ಅಲ್ಲಿಯೂ ಪರಸ್ಪರ ಹೊಡೆದಾಟ ನಡೆದಿದೆ.

Advertisement

ಎರಡು ಗುಂಪಿನ ಯುವಕರು ಆಸ್ಪತ್ರೆ ಸಿಬ್ಬಂದಿಯ ಬುದ್ಧಿಮಾತನ್ನು ಲೆಕ್ಕಿಸದೆ   ತಳ್ಳಾಡಿ  ಹೊಡೆದಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ಘಟಕದ ಪೀಠೋಪಕರಣ ಗಳು ಹೊಡೆದಾಟಕ್ಕೆ ಬಳಕೆಯಾಗಿದೆ. ಇವೆಲ್ಲ ಘಟನಾವಳಿಗಳು ಆಸ್ಪತ್ರೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎರಡು ಗುಂಪುಗಳ ಗಲಾಟೆಗೆ ಹಳೆಯ ವೈಷಮ್ಯ ಕಾರಣ ಎಂದು ತಿಳಿದುಬಂದಿದೆ.

ಈ ಗಲಾಟೆಯಿಂದಾಗಿ ಬೂದಿ ಮುಚ್ಚಿದ ಕೆಂಡದಂತ್ತಾಗಿರುವ ಕಠಾರಿಪಾಳ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸುವ ಪ್ರಯತ್ನ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next