Advertisement

Belur: ಕೈ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ- ಆಸ್ಪತ್ರೆಗೆ ದಾಖಲು

11:15 PM Dec 09, 2023 | Team Udayavani |

ಬೇಲೂರು: ಹಾಸನ ಜಿಲ್ಲೆ ಬೇಲೂರು ತಾಲೂಕು ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಇಬ್ಬರಿಗೆ ಗಾಯವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿ ಜತ್ತೇನಹಳ್ಳಿ ರಾಮಚಂದ್ರ ನೇತೃತ್ವದಲ್ಲಿ ಪಟ್ಟಣದ ಹೊರ ವಲಯದಲ್ಲಿ ಶನಿವಾರ ಕಾರ್ಯಕರ್ತರ ಸಭೆ ನಡೆದಿದೆ.

Advertisement

ಈ ವೇಳೆ ಮಾಜಿ ಸಚಿವ ಬಿ.ಶಿವರಾಂ ಮಾತನಾಡುತ್ತ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಕೆಲವು ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡದೆ ಇದ್ದುದರಿಂದ ಬೇಲೂರಿನಲ್ಲಿ ಪಕ್ಷಕ್ಕೆ ಸೋಲಾಯಿತು ಎಂದು ಹೇಳಿದ ಕೂಡಲೇ ಕೆಲವರು ಪ್ರತಿಭಟಿಸಿದರು. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ರೂಪಕ್ಕೆ ತಿರುಗಿ ಕೆಲವರು ಕುರ್ಚಿಗಳನ್ನು ಎಸೆದು ಕೈ ಕೈ ಮಿಲಾಯಿಸಿಕೊಂಡರು. ಈ ಸಂದರ್ಭ ಕಾರ್ಯಕರ್ತರಾದ ಧನಪಾಲ ಮತ್ತು ಮಲ್ಲಿಕಾ ಎಂಬವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next