Advertisement

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

08:20 PM Sep 19, 2021 | Team Udayavani |

ರಾಣೆಬೆನ್ನೂರು: ರಾಜ್ಯದಲ್ಲಿ 1ರಿಂದ 5ರ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ.

Advertisement

ಪುಟ್ಟ ಮಕ್ಕಳನ್ನು ಕೋವಿಡ್‌, ಡೆಂಗ್ಯೂ ಸಹಿತ ಇತರ ಮಾರಕ ರೋಗಗಳಿಂದ ರಕ್ಷಿಸುವ ಸಲುವಾಗಿ ತಾಂತ್ರಿಕ ತಜ್ಞರು, ಶಿಕ್ಷಣ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಅಧಿವೇಶನದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ತಾಲೂಕಿನ ಸುಕ್ಷೇತ್ರ ದೇವರಗುಡ್ಡದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನೆರೆ ರಾಜ್ಯ ಕೇರಳದಲ್ಲಿ ಕೋವಿಡ್‌, ನಿಫಾ ರೋಗ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ಅಧಿಕಗೊಳ್ಳುತ್ತಿದೆ. ಈ ಕಾರಣದಿಂದ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸದ್ಯಕ್ಕೆ ಶಾಲೆ ತೆರೆಯುವುದು ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ:ಏಳು ದಿನಗಳ ಪೂಜೆ ಬಳಿಕ ಬೌದ್ಧ ಸನ್ಯಾಸಿ ಲೊಬ್‌ಸಂಗ್ ಪುಂಟ್ಸೊಕ್ ಅಂತ್ಯಕ್ರಿಯೆ

Advertisement

Udayavani is now on Telegram. Click here to join our channel and stay updated with the latest news.

Next