Advertisement

ಪಾನ್ ಅಂಗಡಿ ಮಾಲಕನ 14 ವರ್ಷದ ಮಗನ ಅಪಹರಿಸಿ ಒಂದು ಕೋಟಿ ರೂ. ಬೇಡಿಕೆ!

02:21 PM Jul 28, 2020 | keerthan |

ಗೋರಖ್ ಪುರ: ಆರನೇ ತರಗತಿಯ ವಿದ್ಯಾರ್ಥಿಯೋರ್ವನನ್ನು ಅಪಹರಿಸಿ ಒಂದು ಕೋಟಿ ರೂ. ಬೇಡಿಕೆಯಿಟ್ಟು, ನಂತರ ಬರ್ಬರವಾಗಿ ಕೊಂದ ಘಟನೆ ಉತ್ತರ ಪ್ರದೇಶ ರಾಜ್ಯದ ಗೋರಖ್ ಪುರ ಜಿಲ್ಲೆಯಲ್ಲಿ ರವಿವಾರ ನಡೆದಿದೆ.

Advertisement

ಮೃತ ಬಾಲಕನ ಶರೀರ ಇಲ್ಲಿನ ಅರಣ್ಯ ಪ್ರದೇಶದಲ್ಲಿ ಸೋಮವಾರ ಸಂಜೆ ಪತ್ತೆಯಾಗಿದೆ.

ಇಲ್ಲಿನ ಪಾನ್ ಅಂಗಡಿ ಮಾಲಕನ 14 ವರ್ಷದ ಬಾಲಕನನ್ನು ದುಷ್ಕರ್ಮಿಗಳು ರವಿವಾರ ಅಪಹರಿಸಿ ಒಂದು ಕೋಟಿ ರೂ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ ಅದೇ ರಾತ್ರಿ ಬಾಲಕನನ್ನು ಹತ್ಯೆಗೈದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶ ರಾಜ್ಯದಲ್ಲಿ ಮಕ್ಕಳ ಅಪಹರಣ ಮತ್ತು ಹತ್ಯೆ ಪ್ರಕರಣಗಳು ಹೆಚ್ಚುತ್ತಿದೆ. ಗೋರಖ್ ಪುರ ಪ್ರಕರಣಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಕ್ರೋಶ ವ್ಯಕ್ತಪಡಿಸಿದ್ದು, ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next