Advertisement

ದುರಸ್ತಿ ಕಾಣದ ಶುದ್ಧ ನೀರಿನ ಘಟಕ

12:38 PM Jun 12, 2022 | Team Udayavani |

ಕುದೂರು: ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು, ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರಿತಪಿಸು ವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಿದೆ.

Advertisement

ಆದರೆ, ಅದು ಕೆಟ್ಟರೆ ಮತ್ತೆ ದುರಸ್ತಿಗೊಳಿ ಸದೆ ಆಡಳಿತ ಯಂತ್ರ ಕಡೆಗಣಿಸಿರುವು ದರಿಂದ ಗ್ರಾಮಗಳಲ್ಲಿ ಮತ್ತೆ ಹಳೆಯ ಪದ್ಧತಿ ಮರಳುವಂತಿದೆ. ಮಾಗಡಿ ತಾಲೂಕಿನ ಬಿಸ್ಕೂರು ಗ್ರಾಪಂ ವ್ಯಾಪ್ತಿಯ ಬಿಸಲಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವರ್ಷವೇ ಕಳೆದರೂ ಈವರೆಗೂ ಇದನ್ನು ಯಾರೂ ದುರಸ್ತಿಗೊಳಿಸಿಲ್ಲ. ಈ ಗ್ರಾಮಗಳಲ್ಲಿ ಪ್ಲೊರೈಡ್‌ ಅಂಶ ಅಧಿಕವಾಗಿದ್ದು, ಜನರು ಲವಣಾಂಶ ತುಂಬಿರುವ ನೀರು ಕುಡಿದು ಹಲವು ಕಾಯಿಲೆಗಳಿಗೆ ತುತ್ತಾಗಿದ್ದರು. ನಿತ್ಯ ಒಂದಲ್ಲ ಒಂದು ಅನಾರೋಗ್ಯಕ್ಕೆ ಸಿಲುಕಿ ಪರದಾಡುತ್ತಿದ್ದರು. ಈ ಹಿನ್ನೆಲೆ ಸರ್ಕಾರ ಶುದ್ಧ ನೀರಿನ ಘಟಕ ಅಳವಡಿಸಿತ್ತು. ಆದರೆ, ಯಂತ್ರಗಳು ಕೆಟ್ಟ ಬಳಿಕ ಕೇಳುವವರೇ ಇಲ್ಲ. ಬಿಸಲಹಳ್ಳಿ, ಬಸವನಗುಡಿಪಾಳ್ಯ ಗ್ರಾಮದಲ್ಲಿ ಅಧಿಕ ಪ್ರಮಾಣದ ಪ್ಲೊರೈಡ್‌ ಅಂಶವಿದೆ.

ಗ್ರಾಪಂ, ಜಿಪಂ, ಶಾಸಕರ ನಿರ್ಲಕ್ಷ್ಯ: ಬಸನಗುಡಿ ಪಾಳ್ಯ ಮತ್ತು ಬಿಸಲಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವರ್ಷಗಳೇ ಕಳೆದರೂ, ಯಾರೂ ಗ್ರಾಮದ ಕಡೆ ಮುಖ ಮಾಡಿಲ್ಲ. ಈ ಎರಡು ಗ್ರಾಮದವರು ಶುದ್ಧ ಕುಡಿಯುವ ನೀರು ಕುಡಿಯಲು ತರಲು 3 ಕಿ.ಮೀ. ದೂರದ ಕುದೂರು ಇಲ್ಲವೇ ಮರೂರು ಹ್ಯಾಂಡ್‌ ಪೋಸ್ಟ್‌ ಬಳಿಗೆ ಹೋಗಿ ಶುದ್ಧ ನೀರನ್ನು ತರುವ ಪರಿಸ್ಥಿತಿ ಎದುರಾಗಿದೆ. ಪ್ರತಿದಿನವೂ ಕೆಲಸ, ಕಾರ್ಯ ಬಿಟ್ಟು ದೂರದ ಊರುಗಳಿಗೆ ಅಲೆಯುವಂತಾಗಿದೆ.

ಯಂತ್ರಗಳು ಕೆಟ್ಟಿರುವ ಬಗ್ಗೆ ಗ್ರಾಪಂಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿಲ್ಲ. ಜಿಪಂ ಎಇಇ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ. ಇನ್ನು ಶಾಸಕರ ಗಮನಕ್ಕೆ ತಂದರೂ ಆಸಕ್ತಿ ತೋರುತ್ತಿಲ್ಲ ಎಂದು ಗ್ರಾಮದ ಹಿರಿಯರು ಆರೋಪಿಸಿದ್ದಾರೆ.

ಯಂತ್ರೋಪಕರಣ ತುಕ್ಕು ಹಿಡಿಯುತ್ತಿವೆ: ತಾಲೂಕಿನ ಗ್ರಾಮಗಳಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾಯ ನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನಪ್ರತಿನಿಧಿ, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಿದೆ. ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

Advertisement

ಶೀಘ್ರದಲ್ಲೇ ಸಮಸ್ಯೆಗೆ ಪರಿಹಾರ: ಭರವಸೆ : ಗ್ರಾಮೀಣ ಭಾಗದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರುಪಯುಕ್ತ ವಾಗಿರುವ ಬಗ್ಗೆ ಮಾಹಿತಿ ಬಂದಿದೆ. ದುರಸ್ತಿ ಬಗ್ಗೆ ಕ್ರಮ ವಹಿಸಲಾಗುವುದು. ತ್ವರಿತವಾಗಿ ಎರಡು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸಿ ಶೀಘ್ರದಲ್ಲೇ ಜನರಿಗೆ ಶುದ್ಧ ನೀರು ಪೂರೈಸಲು ಕ್ರಮ ವಹಿಸಲಾಗುವುದು ಎಂದು ಡಿ.ಕೆ. ಚಾರಿಟಬಲ್‌ ಟ್ರಸ್ಟ್‌ ತಿಳಿಸಿದೆ.

ನೀರಿನ ಘಟಕ ನಮ್ಮ ಪಂಚಾಯಿತಿಗೆ ಸುಪರ್ದಿಗೆ ನೀಡಿಲ್ಲ. ಡಿ.ಕೆ.ಟ್ರಸ್ಟ್‌ ಅಂತ ಮಾಡಿಕೊಂಡು ಅವರೇ ಘಟಕ ಸ್ಥಾಪಿಸಿ ಅವರ ಸುಪರ್ದಿನಲ್ಲೇ ಇದೆ. ನಾವೂ ಕೂಡ 3 ಬಾರಿ ರಿಪೇರಿ ಮಾಡಿ ಸಿದ್ದೇವೆ. ಟ್ರಸ್ಟ್‌ನವರು ನಮ್ಮ ಪಂಚಾಯಿತಿ ಸುಬರ್ಧಿಗೆ ಬಿಟ್ಟರೆ ನಾವು ಘಟಕವನ್ನು ನಿರ್ವಹಿಸುತ್ತೇವೆ. -ಲಕ್ಷ್ಮಮ್ಮ, ಬಿಸ್ಕೂರು ಗ್ರಾಪಂ ಅಧ್ಯಕ್ಷೆ

ನೀರಿನ ಘಟಕವನ್ನು ಶೀಘ್ರದಲ್ಲೇ ದುರಸ್ತಿಗೊಳಿಸಬೇಕು. ಇದು ಹಾಳಾಗಿರುವ ಕಾರಣ ಕುಡಿಯುವ ನೀರಿಗಾಗಿ ಅಲೆಯಬೇಕಿದೆ. ಇಲ್ಲಿನ ಘಟಕ ದುರಸ್ತಿ ಯಾದರೆ, ಸುತ್ತಮುತ್ತಲಿನ ನಾಗರಿಕರಿಗೆ ನೀರಿನ ಸಮಸ್ಯೆ ನಿವಾರಣೆ ಆಗಲಿದೆ. – ಆರಾಧ್ಯ, ಬಿಸಲಹಳ್ಳಿ ಗ್ರಾಮಸ್ಥ

Advertisement

Udayavani is now on Telegram. Click here to join our channel and stay updated with the latest news.

Next